ಶ್ರೀ ಸಮರ್ಥ ರಾಮದಾಸ ಸ್ವಾಮಿಗಳ ಮನೋಬೋಧ

Author : ಎಸ್‌.ಆರ್‌. ರಾಮಸ್ವಾಮಿ

Pages 102

₹ 30.00




Year of Publication: 1997
Published by: ರಾಷ್ಟ್ರೋತ್ಥಾನ ಸಾಹಿತ್ಯ
Address: ಬೆಂಗಳೂರು-19.

Synopsys

`ಶ್ರೀ ಸಮರ್ಥ ರಾಮದಾಸ ಸ್ವಾಮಿಗಳ ಮನೋಬೋಧ' ಈ ಕೃತಿಯು ರಾಮದಾಸ ಸ್ವಾಮಿಗಳ ಸಮಗ್ರ ಜೀವನಚರಿತ್ರೆಯನ್ನು ಪರಿಚಯಿಸುತ್ತದೆ. ಲೇಖಕ ಎಸ್.‌ ಆರ್.‌ ರಾಮಸ್ವಾಮಿ ಅವರು ರಚಿಸಿದ್ದಾರೆ. ಭಾರತದ ಸಂತ ಶ್ರೇಷ್ಠರಲ್ಲೊಬ್ಬರಾದ ಶ್ರೀ ಸಮರ್ಥ ರಾಮದಾಸರ ರಚನೆಗಳಲ್ಲಿ ಅತ್ಯಂತ ಜನಪ್ರಿಯವಾದ್ದು ’ಮನೋಬೋಧ’. ಎಲ್ಲ ಸ್ತರಗಳವರಿಗೂ ಉಪಯುಕ್ತವಾದ ಹಿತವಚನಗಳು ಈ ಶ್ಲೋಕಗಳಲ್ಲಿವೆ. ಲೌಕಿಕದಿಂದ ಹಿಡಿದು ಗಾಢ ಅಧ್ಯಾತ್ಮ ಪ್ರವೃತ್ತಿ ಉಳ್ಳವರಿಗೆ ಎಲ್ಲರೂ ತಮ್ಮತಮ್ಮ ಸಾಧನೆಗೆ ಅನುಗುಣವಾಗಿ ಈ ಶ್ಲೋಕಗಳಲ್ಲಿ, ವಿವಿಧ ಆಯಾಮಗಳಲ್ಲಿ ಅರ್ಥವನ್ನು ಕಂಡುಕೊಳ್ಳಬಹುದು ಎಂದು ಪುಸ್ತಕದ ಕುರಿತಾಗಿ ವಿವರಿಸಲಾಗಿದೆ. 

About the Author

ಎಸ್‌.ಆರ್‌. ರಾಮಸ್ವಾಮಿ

ನಾಡೋಜ ಎಸ್‌.ಆರ್‌.ರಾಮಸ್ವಾಮಿ ಅವರು ಪತ್ರಕರ್ತರಾಗಿ, ಲೇಖಕರಾಗಿ, ಚಿಂತಕರಾಗಿ, ವಿಮರ್ಶಕರಾಗಿ, ಸಾಮಾಜಿಕ ಕಾರ್ಯಕರ್ತರಾಗಿ ನಾಡಿನಲ್ಲಿ ಸುಪರಿಚಿತರು. ಮೂಲತಃ ಬೆಂಗಳೂರಿನವರೇ ಆದ ರಾಮಸ್ವಾಮಿ ಅವರು ಕನ್ನಡ, ತೆಲುಗು, ಸಂಸ್ಕೃತ, ಹಿಂದಿ, ಇಂಗ್ಲಿಷ್, ಜರ್ಮನ್, ಫ್ರೆಂಚ್ ಭಾಷೆಗಳಲ್ಲಿ ಪ್ರಾವೀಣ್ಯತೆ ಹೊಂದಿದವರು. 1950ರ ದಶಕದಲ್ಲಿ ಪತ್ರಿಕೋದ್ಯಮ ಪ್ರವೇಶಿಸಿದ ಇವರು, 1972 ರಿಂದ 79ರ ವರೆಗೆ ಸುಧಾ ವಾರಪತ್ರಿಕೆಯ ಮುಖ್ಯ ಉಪಸಂಪಾದಕರಾಗಿ ಸೇವೆ ಸಲ್ಲಿಸಿದರು. 1980ರಲ್ಲಿ ರಾಷ್ಟೋತ್ಥಾನ ಸಾಹಿತ್ಯ ಮತ್ತು ಉತ್ಥಾನ ಮಾಸಪತ್ರಿಕೆಯ ಗೌರವ ಪ್ರಧಾನ ಸಂಪಾದಕರಾದ ಇವರು ಇಂದಿಗೂ ಆ ಹುದ್ದೆಯಲ್ಲಿ ಸೇವಾನಿರತರಾಗಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಸುಮಾರು 55 ಕ್ಕೂ ...

READ MORE

Related Books