About the Author

ತಮ್ಮ ಕತೆ-ಕಾದಂಬರಿಗಳ ಮೂಲಕ ಕನ್ನಡ ಓದುಗರಿಗೆ ಚಿರಪರಿಚಿತ ಇರುವ ಗೀತಾ ಬಿ.ಯು. ಇದುವರೆಗೆ 12 ಕಾದಂಬರಿಗಳನ್ನು ಬರೆದು ಪ್ರಕಟಿಸಿದ್ದಾರೆ. ಬೆಂಗಳೂರಿನವರಾಗಿರುವ ಗೀತಾ  ಅವರ ಕತೆ-ಕಾದಂಬರಿಗಳು ಕನ್ನಡದ ಮಾಸ ಹಾಗೂ ವಾರ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ’ಅವರನ್ನು ಬಿಟ್ಟು ಇವರನ್ನು ಬಿಟ್ಟು ಇವರು ಯಾರು’  ಹಾಗೂ ’ಮಿಥ್ಯ’ ಕಾದಂಬರಿಗಳು ಸುಧಾ ವಾರಪತ್ರಿಕೆಯಲ್ಲಿ ಪ್ರಕಟವಾಗಿದ್ದವು. ಸೋಲು ಗೆಲುವಿನ ಹಾದಿಯಲ್ಲಿ, ಹೊಂಗೆಯ ನೆರಳು, ಕೈ ಹಿಡಿದು ನಡೆಸನ್ನೆನ್ನನು, ಆರದಿರಲಿ ಬೆಳಕು, ವಾರಸುದಾರ, ಅದೇ ಏಕಾಂತ, ಜೊತೆ-ಜೊತೆಯಲಿ ಮುಂತಾದವು ಇವರ ಇನ್ನಿತರ ಕಥಾ ಸಂಕಲನ ಹಾಗೂ ಕಾದಂಬರಿಗಳು. ಆಂಗ್ಲ ಮಾಧ್ಯಮದಲ್ಲಿ ಓದಿರುವ ಗೀತಾ ಅವರು ಸಂವಹನಕ್ಕೆ ಕನ್ನಡವನ್ನು ಆಯ್ಕೆ ಮಾಡಿದ್ದಾರೆ. ಕಿರುತೆರೆಯಲ್ಲಿಯೂ ಕಾಣಿಸಿದ ಅನುಭವ ಅವರಿಗಿದೆ.

ಗೀತಾ ಬಿ.ಯು

BY THE AUTHOR