About the Author

ಲೇಖಕ ಕೃಷ್ಣ ರಾಯಚೂರು ಕವಿ, ಕಲಾವಿದ. 1964ರಲ್ಲಿ ಜನನ. ಕನ್ನಡ, ಹಿಂದಿ, ಫ್ರೆಂಚ್ ಚಲನಚಿತ್ರಗಳಿಗೆ ಸಹ ಕಲಾನಿರ್ದೇಶಕರಾಗಿ ಕಾರ್ಯನಿರ್ವಹಿಸಿರುವ ಅವರು ಪ್ರತಿಷ್ಠಿತ ಸಾಂಸ್ಕೃತಿಕ ಉತ್ಸವ ವೇದಿಕೆಗಳ ವಿನ್ಯಾಸ, ದೇವ್ ನಾಗೇಶ್ ನಂದನ ರಂಗತಂಡ ರೂಪಿಸಿದ 100 ಗಂಟೆಗಳ ನಿರಂತರ ನಾಟಕದ ರಂಗವಿನ್ಯಾಸಕ್ಕಾಗಿ ಲಿಮ್ಕಾ ಪ್ರಶಸ್ತಿಯನ್ನು ಪಡೆದಿರುತ್ತಾರೆ. ಕೃತಿಗಳು: ವಿನ್ಯಾಸದ ಹೊರಗೆ, ಜೋಳಿಗೆಯಲ್ಲೊಂದು ಅಗುಳು(ಕವನ ಸಂಕಲನ), ಬೆಂಡು ಬತಾಸು

ಕೃಷ್ಣ ರಾಯಚೂರು