ದ್ರಾವಿಡ ಚಳವಳಿಯ ಪ್ರವರ್ತಕ, ಮಹಾನ್ ಚಿಂತಕ ಪೆರಿಯಾರ್ ರಾಮಸ್ವಾಮಿ ಅವರ ಕೃತಿ ’ಸ್ವಾಭಿಮಾನದ ಮದುವೆಗಳು’. ವೈದಿಕ ಮದುವೆಗಳು ಹೇಗೆ ಅರ್ಥಹೀನವಾಗಿವೆ ಮತ್ತು ಮಹಿಳೆಯರ ಸ್ವಾಭಿಮಾನಕ್ಕೆ ಧಕ್ಕೆ ತರುವಂತಿವೆ, ಶೋಷಿತರನ್ನು ಆರ್ಥಿಕವಾಗಿ ಮತ್ತಷ್ಟು ಶೋಷಿಸುತ್ತಿವೆ ಎಂಬ ಚಿತ್ರಣ ಇಲ್ಲಿದೆ. ಬಿ. ಸುಜ್ಞಾನಮೂರ್ತಿ ಕೃತಿಯನ್ನು ಕನ್ನಡಕ್ಕೆ ತಂದಿದ್ದಾರೆ. ಕಾನೂನಿನ ದೃಷ್ಟಿಯಲ್ಲಿ ಮದುವೆ, ಶೂದ್ರರ ಬದುಕಿನಲ್ಲಿ ಅದು ವಹಿಸುವ ಪಾತ್ರ, ಮದುವೆಯನ್ನು ಸುತ್ತಿಕೊಂಡಿರುವ ಜ್ಯೋತಿಷ್ಯ ಇತ್ಯಾದಿ ವಿಚಾರಗಳ ಕುರಿತು ಹಲವು ಒಳನೋಟಗಳು ಕೃತಿಯಲ್ಲಿವೆ.
ಕನ್ನಡ ವಿಶ್ವವಿದ್ಯಾಲಯದ ಪ್ರಸಾರಾಂಗದಲ್ಲಿ ಸಹಾಯಕ ನಿರ್ದೇಶಕರಾಗಿರುವ ಬಿ. ಸುಜ್ಞಾನಮೂರ್ತಿ ಅವರು ಅನುವಾದ ಕ್ಷೇತ್ರದಲ್ಲಿ ಮಹತ್ವದ ಕೆಲಸ ಮಾಡುತ್ತಿದ್ದಾರೆ. ಯಾರದೀ ಕಾಡು, ಅಸಮರ್ಥನ ಜೀವನಯಾತ್ರೆ, ಬೆಕ್ಕಿನ ಆತ್ಮಕತೆ, ನೇಣುಗಂಬದ ನೆರಳಿನಲ್ಲಿ, ನಮಗೆ ಗೋಡೆಗಳಲ್ಲ, ಜಾತಿವಿನಾಪ, ದಲಿತತತ್ವ, ಪುರುಷ ಅಹಂಕಾರಕ್ಕೆ ಸವಾಲ್, ದಲಿತ ಹೋರಾಟಗಾರ ಅರ್ಯ ಕಾಳಿ, ಚಾರ ಮಾರ್ಗವಿನಾಶ, ಪರಿಯಾರ್ ಜೀವನಚಳವಳಿ, ತಿಗುರಿ ತಿರುಗಿಸು ನೇಗಿಲು ಉಳು, ದಲಿತ ರಾಜಕೀಯ, ಆಕಾಶದೇವರು, ಮುಸತಿ ಅಪರಾಧ-ಶಿಕ್ಷೆ, ಸ್ವಾಭಿಮಾನದ ಮದುವೆಗಳು, ಆಸ್ಪಕೃತ, ತೆಲಂಗಾಣ ಹೋರಾಟ ಆದ ಪ್ರಮುಖ ಅನುವಾದಿತ ಕೃತಿಗಳು. ಯಾರದೀ ಕಾಡು ಕಾದಂಬರಿಗೆ ಮತ್ತು ತೆಲಂಗಾಣ ಹೋರಾಟ ಕೃತಿಗೆ ಕರ್ನಾಟಕ ...
READ MORE