ಕತೆಗಾರರೂ, ಬರಹಗಾರರೂ ಆದ ವಸುಧೇಂದ್ರ ಬರೆದಿರುವ ಸುಲಲಿತ ಪ್ರಬಂಧಗಳ ಸಂಕಲನ ಕೃತಿ ’5 ಪೈಸೆ ವರದಕ್ಷಿಣೆ’.
ಲೇಖಕರ ಬಾಲ್ಯ, ಮತ್ತು ಅವರ ವೃತ್ತಿ ಬದುಕಿನ ಬಗ್ಗೆಯೂ ಇಲ್ಲಿರುವ ಪ್ರಬಂಧಗಳಲ್ಲಿ ಪ್ರಸ್ತಾಪವಿದೆ.
ಚುಕ್ಕಿ ಬಾಳೆಯ ಹಣ್ಣನ್ನು ಕಂಡಾಗಲೆಲ್ಲ ಲೇಖಕರನ್ನು ಕಾಡುವ ನೆನವರಿಕೆ, ವಾರಣಾಸಿಯಲ್ಲಿನ ಪ್ರವಾಸಾನುಭವ, ಚಾರಣಕ್ಕೆ ಹೊರಡುವವರ ಪೀಕಲಾಟ ಹೀಗೆ, ಎಲ್ಲ ನಮೂನೆಯ ವಿಷಯಗಳ ಕುರಿತಾದ ಬರಹಗಳಿವೆ. ಮಹಾಭಾರತದಲ್ಲಿನ ಒಳಸುಳಿಗಳನ್ನು ಬಿಚ್ಚಿಡುವ ಪ್ರಯತ್ನವೂ ಕೆಲ ಪ್ರಬಂಧ ಬರಹಗಳಲ್ಲಿ ನವಿರಾಗಿ ಸಾಗಿದೆ.
ವಸುಧೇಂದ್ರ ಅವರು ಕನ್ನಡದ ಪ್ರಸಿದ್ಧ ಬರಹಗಾರರು ಹಾಗೂ ಪುಸ್ತಕ ಪ್ರಕಾಶಕರು. ಮುಖ್ಯವಾಗಿ ಕತೆ, ಕಾದಂಬರಿ, ಲಲಿತ ಪ್ರಬಂಧಗಳು ಇವರ ಬರವಣಿಗೆಯ ಪ್ರಕಾರಗಳು. ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ 1969ರಲ್ಲಿ ಜನಿಸಿದ ವಸುಧೇಂದ್ರ ಅಲ್ಲಿಯೇ ಪ್ರಾಥಮಿಕ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ. ಆನಂತರ ಸುರತ್ಕಲ್ ನಿಂದ ಇಂಜಿನಿಯರಿಂಗ್ ಪದವಿ ಮತ್ತು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಯ್ ನಿಂದ ಎಂ.ಇ. ಪದವಿ ಪಡೆದಿದ್ದಾರೆ. ಸುಮಾರು 20 ವರ್ಷಗಳ ಕಾಲ ಸಾಫ್ಟ್ ವೇರ್ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಅವರು ಸದ್ಯ ಬೆಂಗಳೂರಿನಲ್ಲಿ ವಾಸವಿದ್ದು, ಸದ್ಯಕ್ಕೆ ಸಾಹಿತ್ಯಿಕ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಮನೀಷೆ, ಯುಗಾದಿ, ಚೇಳು, ಹಂಪಿ ಎಕ್ಸ್ ...
READ MOREಐದು ಪೈಸೆ ವರದಕ್ಷಿಣಿ ಪುಸ್ತಕದ ಮುನ್ನೋಟ