ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ನಾಟಕಕಾರ ಗಿರೀಶ ಕಾರ್ನಾಡ ಅವರ ಆತ್ಮಕತೆ ’ಆಡಾಡತ ಆಯುಷ್ಯ’. ಬೇಂದ್ರೆಯವರ ಕವಿತೆಯ ಸಾಲನ್ನು ಕಾರ್ನಾಡರು ತಮ್ಮ ಆತ್ಮಕತೆಯ ಶೀರ್ಷಿಕೆ ಮಾಡಿದ್ದಾರೆ.
ಶಿರಸಿಯಲ್ಲಿ ಬಾಲ್ಯ ಕಳೆದ ಕಾರ್ನಾಡ ಅವರು ಧಾರವಾಡದ ಕಾಲೇಜು, ಆಕ್ಸಫರ್ಡ್ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕವಿಯಾಗಬೇಕು ಅಂದು ಕೊಂಡಿದ್ದ ಕಾರ್ನಾಡರು ಹರಯದ ದಿನಗಳಲ್ಲಿ ಚಿತ್ರ ಬಿಡಿಸಿ ಅದನ್ನು ಗಣ್ಯರಿಗೆ ಕಳಿಸಿ ಅವರ ಹಸ್ತಾಕ್ಷರ ಸಂಗ್ರಹಿಸುವ ಪರಿಪಾಠ ಇಟ್ಟುಕೊಂಡಿದ್ದರು.
ನಾಟಕಕಾರ, ನಟ, ನಿರ್ದೇಶಕ, ರಂಗತಜ್ಞ, ಆಡಳಿತಗಾರ ಹೀಗೆ ಹತ್ತು ಹಲವು ರೀತಿಯಲ್ಲಿ ಅನಾವರಣಗೊಂಡಿರುವ ಕಾರ್ನಾಡರ ವ್ಯಕ್ತಿತ್ವ ಅವರದೇ ಮಾತುಗಳಲ್ಲಿ ಓದುಗ ಸೊಗಸು ಈ ಪುಸ್ತಕದಿಂದ ದೊರೆಯುತ್ತದೆ. ವಿಶಿಷ್ಟ ಅನುಭವಗಳನ್ನು ಮನಮುಟ್ಟುವ ರೀತಿಯಲ್ಲಿ ಕಾರ್ನಾಡರು ದಾಖಲಿಸಿದ್ದಾರೆ.
ನಾಟಕಕಾರ ಗಿರೀಶ್ ಕಾರ್ನಾಡ್ ಅವರು ರಂಗಭೂಮಿ- ಚಲನಚಿತ್ರ ನಟರಾಗಿ, ನಿರ್ದೇಶಕರಾಗಿ, ಸಂಗೀತ- ನಾಟಕ ಅಕಾಡೆಮಿಗಳ ಅಧ್ಯಕ್ಷರಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧರಾಗಿದ್ದಾರೆ. ಕತೆ, ವಿಮರ್ಶೆ ಮತ್ತು ತಮ್ಮ ಆತ್ಮಕತೆ ‘ಆಡಾಡತ ಆಯುಷ್ಯ’ಗಳನ್ನು ಬರೆದಿದ್ದರೂ ನಾಟಕಕಾರ ಎಂದೇ ಚಿರಪರಿಚಿತರು. ಗಿರೀಶ್ 1934ರ ಮೇ 19ರಂದು ಮಹಾರಾಷ್ಟ್ರದ ಮಾಥೇರದಲ್ಲಿ ಜನಿಸಿದರು. ಉತ್ತರಕನ್ನಡದ ಶಿರಸಿಯಲ್ಲಿ ಪ್ರಾಥಮಿ ಶಿಕ್ಷಣ ಧಾರವಾಡದ ಬಾಸೆಲ್ ಮಿಶನ್ ಪ್ರೌಢಶಿಕ್ಷಣ, ಹಾಗೂ ಕರ್ನಾಟಕ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದ ಬಳಿಕ ಪ್ರತಿಷ್ಠಿತ ರೋಡ್ಸ್ ಸ್ಕಾಲರ್ಶಿಪ್ ಪಡೆದುಕೊಂಡು ಆಕ್ಸ್ ಫರ್ಡಿನಲ್ಲಿ ಹೆಚ್ಚಿನ ವ್ಯಾಸಂಗ ಮಾಡಿದರು. ಆಕ್ಸ್ ಫರ್ಡಿನ ಡಿಬೇಟ್ ಕ್ಲಬ್ಬಿಗೆ ಅಧ್ಯಕ್ಷರಾಗಿ ಆಯ್ಕೆಯಾದ ...
READ MORE