`ಆದರ್ಶ ರಾಜಕಾರಣಿ ಎಸ್.ಆರ್ ಬೊಮ್ಮಾಯಿ’ ಸರಜೂ ಕಾಟ್ಕರ್ ಅವರು ಬರೆದಿರುವ ವ್ಯಕ್ತಿಚಿತ್ರಣ ಕೃತಿಯಾಗಿದೆ. ಎಸ್.ಆರ್. ಬೊಮ್ಮಾಯಿ ಅವರದು ನಾಡಿನ ರಾಜಕೀಯ ಪರಂಪರೆಯಲ್ಲಿ ಮರೆಯಲಾಗದ ಹೆಸರಾಗಿದ್ದು ಅವರು ಕೇಂದ್ರ ಸಚಿವರು, ಮುಖ್ಯಮಂತ್ರಿಗಳು, ರಾಜ್ಯ ಸಚಿವರು ಹೀಗೆ ವಿವಿಧ ರಾಜಕೀಯ ಹುದ್ದೆಗಳನ್ನು ಅಲಂಕರಿಸಿ ಅವುಗಳೆಲ್ಲವಕ್ಕೂ ಗೌರವವನ್ನು ತಂದವರು. ಪಕ್ಷದ ಮಿತಿಯನ್ನು ಮೀರಿ ಸದಾ ಜನಹಿತಕ್ಕೆ ದುಡಿದು ಜನಪ್ರತಿನಿಧಿಗಳು ಹೇಗಿರಬೇಕು ಎನ್ನುವುದಕ್ಕೆ ನಿದರ್ಶನವಾದವರು. ಅವರ ವ್ಯಕ್ತಿತ್ವ ಮತ್ತು ಸಾಧನೆಗಳನ್ನು ಒಟ್ಟಾಗಿ ಕಟ್ಟಿಕೊಟ್ಟಿರುವ ಈ ಕೃತಿ ಸಾಂಸ್ಕೃತಿಕ ಅಧ್ಯಯನವೂ ಕೂಡ ಆಗಿದೆ ಎನ್ನುತ್ತಾರೆ ಕೃತಿಗೆ ಬೆನ್ನುಡಿ ಬರೆದಿರುವ ನಾಡೋಜ ಮಹೇಶ ಜೋಶಿ.
ವೃತ್ತಿಯಲ್ಲಿ ಪತ್ರಕರ್ತರು ಆಗಿರುವ ಕವಿ ಸರಜೂ ಕಾಟ್ಕರ್ ಅವರು ಜನಿಸಿದ್ದು (1953 ಆಗಸ್ಟ್ 14ರಂದು) ಹುಬ್ಬಳ್ಳಿಯಲ್ಲಿ . ತಂದೆ ಹಣಮಂತರಾವ್, ತಾಯಿ ಗೌರಾಬಾಯಿ. ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ (ಕನ್ನಡ) ಪದವೀಧರರು.ಕರ್ನಾಟಕ ವಿ.ವಿ.ಯಿಂದ ‘ಕನ್ನಡ-ಮರಾಠಿ ದಲಿತ ಸಾಹಿತ್ಯ: ಒಂದು ಅಧ್ಯಯನ’ ವಿಷಯವಾಗಿ (1994) ಪಿಎಚ್ ಡಿ ಪಡೆದರು. ಸಂಯುಕ್ತ ಕರ್ನಾಟಕದಲ್ಲಿ ವರದಿಗಾರರಾಗಿ ವೃತ್ತಿ ಆರಂಭಿಸಿ, ನಂತರ ಇಂಡಿಯನ್ ಎಕ್ಸ್ಪ್ರೆಸ್ ಬಳಗದ ಪತ್ರಿಕೆಯಲ್ಲಿ ಪತ್ರಕರ್ತರಾಗಿದ್ದರು. ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರು ಸೇರಿದಂತೆ ಸರ್ಕಾರದ ಹಲವಾರು ಅಕಾಡೆಮಿ, ಸಮಿತಿ ಹೀಗೆ ವಿವಿಧ ಜವಾಬ್ದಾರಿತ ಸ್ಥಾನಗಳನ್ನು ನಿರ್ವಹಿಸಿದ್ದಾರೆ. ಕೃತಿಗಳು: ಬೆಂಕಿ-ನೀರು, ಹಸಿದ ನೆಲ, ಸೂರ್ಯ, ...
READ MORE