ಪ್ರೊ. ಬಿಪಿನ್ ಚಂದ್ರ ಅವರು ಇಂಗ್ಲಿಷ್ ನಲ್ಲಿ ಬರೆದ ಕೃತಿಯನ್ನು ಇತಿಹಾಸ ತಜ್ಞ ಡಾ. ಎಚ್.ಎಸ್. ಗೋಪಾಲರಾವ್ ಅವರು ಕನ್ನಡಕ್ಕೆ ಅನುವಾದಿಸಿದ ಕೃತಿಯೇ-ಆಧುನಿಕ ಭಾರತದ ಇತಿಹಾಸ. ಸ್ವಾತಂತ್ಯ್ರಾ ನಂತರದ ಭಾರತದಲ್ಲಿ ಅಭಿವೃದ್ಧಿ ಕುರಿತಂತೆ ಸಾಕಷ್ಟು ಬದಲಾವಣೆಗಳು ಆಗತೊಡಗಿದವು. ಇದಕ್ಕೆ ಸಮಾನಾಂತರವಾಗಿ ರಾಜಕೀಯ ಬೆಳವಣಿಗೆಗಳು ನಡೆದವು. ಸಾಂಸ್ಕೃತಿಕ-ಸಾಮಾಜಿಕ-ಶೈಕ್ಷಣಿಕ ಹೀಗೆ ಜನಸಾಮಾನ್ಯರ ಜೀವನ ಮಟ್ಟ ಸುಧಾರಿಸುವುದು ಮತ್ತೊಂದು ಕಡೆ ರಾಜಕೀಯ ಸ್ಥಿರತೆಯನ್ನು ತಂದು ಕೊಡುವುದು ಹಾಗೂ ನೆರೆ ಹೊರೆಯ ದೇಶಗಳೊಡನೆ ಉತ್ತಮ ಬಾಂಧವ್ಯ ಸಾಧಿಸುವುದು ಇಂತಹ ಸಮಸ್ಯೆಗಳ ಮಧ್ಯೆ ಆಧುನಿಕ ಭಾರತ ಸಿಲುಕಿಕೊಂಡಿತ್ತು. ಈ ಎಲ್ಲ ಸಂಗತಿಗಳ ಜಿಜ್ಞಾಸೆಗಳನ್ನು ಇಲ್ಲಿ ಕ್ರೋಢಿಕರಿಸಲಾಗಿದೆ.
ಡಾ. ಎಚ್.ಎಸ್. ಗೋಪಾಲರಾವ್ ಅವರು 1946ರ ನವೆಂಬರ್ 18ರಂದು ನೆಲಮಂಗಲ ತಾಲ್ಲೂಕಿನ ಹುಲ್ಲೇಗೌಡನ ಹಳ್ಳಿಯಲ್ಲಿ ಜನಿಸಿದರು. ಎಲೆಕ್ಟ್ರಿಕಲ್ ಇಂಜನಿಯರಿಂಗ್ ಡಿಪ್ಲೊಮ ಮುಗಿಸಿ ನಂತರ ಅವರು ಮೈಸೂರು ವಿವಿ ಕನ್ನಡ ಎಂ.ಎ. (1984- ಎರಡು ಚಿನ್ನದ ಪದಕ) ಪದವಿ ಪಡೆದರು. ಶಾಸನಗಳ ಹಿನ್ನೆಲೆಯಲ್ಲಿ ಕಲ್ಯಾಣ ಚಾಲುಕ್ಯ ದೇವಾಲಯಗಳು ಒಂದು ಸಾಂಸ್ಕೃತಿಕ ಅಧ್ಯಯನ ಕುರಿತು ಪಿಎಚ್. ಡಿ. ಪದವಿ ಪಡೆದರು. (ಮೈಸೂರು ವಿ ವಿ 1991). ಸರ್ಕಾರಿ ಕಾರ್ಯನಿರ್ವಾಹಕ ಎಂಜಿನಿಯರ್, ಕೆಪಿಟಿಸಿಎಲ್ ನಿಯಮಿತ, (ಕನ್ನಡ ಸಮನ್ವಯಾಧಿಕಾರಿಯಾಗಿ) ಕರ್ನಾಟಕ ಇತಿಹಾಸ ಅಕಾಡೆಮಿಯ ಪ್ರಧಾನ ಕಾರ್ಯದರ್ಶಿಯಾಗಿ, ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಶಾಸನ ಶಾಸ್ತ್ರ ಬೋಧಕರಾಗಿ ಕೆಲಸ ನಿರ್ವಹಿಸಿದ್ದಾರೆ. ಜೇನು ನಂಜು, ...
READ MORE