ಡಾ. ವಸುಂಧರಾ ಭೂಪತಿ ಅವರು ಬರೆದ ಕೃತಿ-ಆರೋಗ್ಯ ವೈವಿಧ್ಯ. ಆರೋಗ್ಯದ ಸ್ವರೂಪ-ಸ್ವಭಾವಗಳನ್ನು ಸಂಪೂರ್ಣವಾಗಿ ತಿಳಿಸಿಕೊಡುವ ಕೃತಿ ಇದು. ಆರೋಗ್ಯವೆಂದರೇನು? ಅನಾರೋಗ್ಯವೆಂದರೇನು? ಆರೋಗ್ಯದಲ್ಲಿ ವೈಪರಿತ್ಯಗಳು ಉಂಟಾಗಲು ಕಾರಣಗಳೇನು? ಇತ್ಯಾದಿ ಮಾಹಿತಿಯ ಉತ್ತಮ ಕೈಪಿಡಿಯಂತಿದೆ ಈ ಕೃತಿ
ಡಾ. ವಸುಂಧರಾ ಭೂಪತಿ ಕರ್ನಾಟಕದ ರಾಯಚೂರಿನಲ್ಲಿ 1962 ರ ಜೂನ್ 5 ರಂದು ಜನಿಸಿದರು. ಇವರು ಬರೆದಿರುವ ವಿಜ್ಞಾನ ಪ್ರಥಮ ಚಿಕಿತ್ಸೆ, ಶುಚಿತ್ವ, ಆರೋಗ್ಯ-ಆರೈಕೆ ಲೇಖನಗಳು ವಾರಪತ್ರಿಕೆ ಹಾಗೂ ದಿನಪತ್ರಿಕೆಗಳಲ್ಲಿ ಪ್ರಕಟಗೊಂಡಿದೆ. ವಸುಂದರಾ ಭೂಪತಿಯವರು ವೈದ್ಯಕೀಯ ಸಾಹಿತ್ಯ ಮಾಲೆ, ಕನ್ನಡ ಪುಸ್ತಕ ಪ್ರಾಧಿಕಾರ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಮಾಸಪತ್ರಿಕೆ ‘ಬಾಲ ವಿಜ್ಞಾನ’, ಆರೋಗ್ಯ ಅನುರಾಗ ಮಾಸಪತ್ರಿಕೆ, ಆಯುರ್ವೇದ ಮತ್ತು ಯೋಗ ಮಾಸಪತ್ರಿಕೆ, ವಿಜ್ಞಾನ ಲೋಕ ತ್ರೈಮಾಸಿಕ ಪತ್ರಿಕೆ ಹಾಗೂ ಆರೋಗ್ಯ ವಿಜ್ಞಾನ ತ್ರೈಮಾಸಿಕ ಪತ್ರಿಕೆಗಳ ಸಂಪಾದಕ ಮಂಡಳಿಯ ಸದಸ್ಯರಾಗಿದ್ದಾರೆ. ಮತ್ತು ವೈದ್ಯ ಲೋಕ ಮಾಸಪತ್ರಿಕೆಯ ಸಂಪಾದಕರಾಗಿ ...
READ MORE