ನಾಡೋಜ ಡಾ. ಪಿ.ಎಸ್. ಶಂಕರ ಅವರ ಕೃತಿ-ಆರೋಗ್ಯಕರ ಜಗತ್ತಿನ ನಿರ್ಮಾಣ. ಆರೋಗ್ಯಕರ ವ್ಯಕ್ತಿತ್ವಗಳು ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಸಮಾಜವು ಸದೃಢ ಶರೀರದ ವ್ಯಕ್ತಿಗಳಿಂದ ಕೂಡಿರಬೇಕು. ರೋಗಗ್ರಸ್ತ ವ್ಯಕ್ತಿಗಳಿಂದ ಸಮಾಜವು ಆರೋಗ್ಯಕರವಾಗಿರುತ್ತದೆ ಎಂಬ ನಿರೀಕ್ಷೆ ತಪ್ಪು. ಹೀಗಾಗಿ, ಆರೋಗ್ಯದ ಮಹತ್ವವನ್ನು ತಿಳಿ ಹೇಳುವ ಕೃತಿ, ಆರೋಗ್ಯಕರ ಸಮಾಜದ ಕಲ್ಪನೆಯನ್ನೂ ನೀಡುತ್ತದೆ.
ವೃತ್ತಿಯಲ್ಲಿ ವೈದ್ಯರಾಗಿ ವೈದ್ಯ ಸಾಹಿತಿಯಾಗಿ ಪ್ರಸಿದ್ಧರಾಗಿರುವ ಡಾ.ಪಿ.ಎಸ್.ಶಂಕರ್ ಅವರು 1936 ಜನವರಿ 1ರಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಹಲಗೇರಿಯಲ್ಲಿ ಜನಿಸಿದರು. ಹುಟ್ಟೂರು ಹಾಗೂ ಚಿತ್ರದುರ್ಗದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಇವರು ಮೈಸೂರು ಮತ್ತು ದೆಹಲಿಯಲ್ಲಿ ವೈದ್ಯಕೀಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಲಬುರ್ಗಿಯ ಎಂ.ಆರ್. ಮೆಡಿಕಲ್ ಕಾಲೇಜಿನಲ್ಲಿ ಅಧ್ಯಾಪಕರಾಗಿ, ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದಾರೆ. ವೃದ್ಧಾಪ್ಯದಲ್ಲಿನ ಕಾಯಿಲೆಗಳು, ಹೃದಯ ಜೋಪಾನ, ಕ್ಯಾನ್ಸರ್, ಹೃದಯ ರೋಗ ತಡೆಗಟ್ಟಿ, ಡಾ. ವಿಕ್ರಂ ಸಾರಾಭಾಯ್, ಮುಂತಾದ ಕೃತಿಗಳನ್ನು ರಚಿಸಿದ್ದಾರೆ. ಸೋವಿಯತ್ ಲ್ಯಾಂಡ್ ನೆಹರು ಪ್ರಶಸ್ತಿ, ರಾಕ್ ಫೆಲ್ಲರ್ ಸ್ಕಾಲರ್ ಇನ್ ರೆಸಿಡೆನ್ಸ ಗೌರವ, ಭಾರತ ಸರ್ಕಾರದ ವಿಜ್ಞಾನ ತಂತ್ರಜ್ಞಾನ ಇಲಾಖೆಯ ...
READ MORE