ಆರ್ಯರಿಗಾಗಿ ಹುಡುಕಾಟ (ಹೊರಗೆ -ಒಳಗೆ) ಶೀರ್ಷಿಕೆಯ ಈ ಕೃತಿಯನ್ನು ಲೇಖಕ ಎಸ್. ಶಂಕರಪ್ಪ ತೋರಣಗಲ್ಲು ಅವರು ರಚಿಸಿದ್ದು, ಆರ್ಯರು ಎಂದರೆ ಯಾರು? ಅವರೇಕೆ ಭಾರತದತ್ತ ಆಗಮಿಸಿದರು, ನಂತರ ಅವರ ಕಾರ್ಯಚಟುವಟಿಕೆಗಳ ಸ್ವರೂಪ ಹೇಗಿತ್ತು? ಭಾರತದ ಮೇಲೆ ಅಧಿಪತ್ಯ ಸ್ಥಾಪಿಸಲು ಅವರ ಕಾರ್ಯ ತಂತ್ರಗಳು ಹೇಗಿದ್ದವು ಇತ್ಯಾದಿ ಕುರಿತು ವಿಶ್ಲೇಷಣೆ ಇಲ್ಲಿದೆ.
ಲೇಖಕ ಎನ್ ಶಂಕರಪ್ಪ ತೋರಣಗಲ್ಲು ಮೂಲತಃ ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಗ್ರಾಮದವರು. ಬೆಂಗಳೂರಿನ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್ ವಿ.ವಿ.ಯಿಂದ ಸ್ನಾತಕೋತ್ತರ ಪದವೀಧರರು. ವೃತ್ತಿಯಲ್ಲಿ ಸಮಾಲೋಚಕ ಇಂಜಿನಿಯರ್ ಆಗಿದ್ದಾರೆ. ಕೃತಿಗಳು: ಸ್ವಾಮಿ ವಿವೇಕಾನಂದ ; ಕಪ್ಪು ಬಿಳುಪು (ಜನಪ್ರಿಯ ರಾಷ್ಟ್ರೀಯ ನಾಯಕ ವಿವೇಕಾನಂದ ಮತ್ತು ಅಜ್ಞಾತ ಸ್ವಾಮಿ ವಿವೇಕಾನಂದರನ್ನು ಬೇರ್ಪಡಿಸಿ ನೋಡಿದ್ದಾರೆ), ವಿಜ್ಞಾನ- ಏನು? ಹೇಗೆ? , ಸಂಗಂ - ತಮಿಳಗಂ, ಲಿಪಿ ನಿಗೂಢ, ಭಗವದ್ಗೀತೆ ಬೆಳಕು ನೀಡುವುದೇ?, ವಾಸ್ತು ಎಂಬ ವ್ಯಾಧಿ, ತಂತ್ರಜ್ಞಾನದ ದೇಸೀಕರಣ- ಕನ್ನಡದ ಜಾಗತೀಕರಣ, ಹಳಗನ್ನಡ- ಸಂಗಂ ತಮಿಳ್ ಮತ್ತು ಸಂಗಂ ಕಾಲದ ತೀರ್ಮಾನ .ಆರ್ಯರು ಯಾರು ? ...
READ MORE