‘ಆತಂಕ’ ಲೇಖಕ ಎನ್. ಎಸ್. ಶ್ರೀಧರಮೂರ್ತಿ ಅವರ ಲೇಖನ ಸಂಕಲನ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಓಪೆಡ್ ಪುಟ ಅಂಕಣಕ್ಕಾಗಿ ಬರೆದ ಲೇಖನಗಳ ಜೊತೆಗೆ ಸಾಹಿತ್ಯ, ಅರ್ಥಶಾಸ್ತ್ರ, ಚಲನಚಿತ್ರ ಹೀಗೆ ಸಾಂಸ್ಕೃತಿಕ ಕ್ಷೇತ್ರಗಳ ಕುರಿತಾದ ಲೇಖನಗಳು ಸಂಕಲನಗೊಂಡಿವೆ. ಈ ಲೇಖನಗಳಿಗಾಗಿ ಒಂದಿಷ್ಟು, ಅಧ್ಯಯನ, ಲೋಕವ್ಯವಹಾರದ ತಿಳಿವಳಿಕೆ ಎಲ್ಲವೂ ನಿರೀಕ್ಷಿತವಾಗಿತ್ತು ಎನ್ನುತ್ತಾರೆ ಲೇಖಕ ಶ್ರೀಧರಮೂರ್ತಿ. ಅಂಕಣಬರಹಕ್ಕಾಗಿ ಬರೆದ ಈ ಲೇಖನಗಳನ್ನು ಇಲ್ಲಿ ಸಂಕಲಿಸಲಾಗಿದೆ.
ಎನ್.ಎಸ್.ಶ್ರೀಧರಮೂರ್ತಿ ಮಂಗಳೂರು ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಚಿನ್ನದ ಪದಕ ಮತ್ತು ರ್ಯಾಂಕ್ ನೊಂದಿಗೆ ಸ್ನಾತಕೋತ್ತರ ಪದವಿಯನ್ನು ಪಡೆದವರು. ಉಪನ್ಯಾಸಕರಾಗಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದ ಇವರು 'ಮಲ್ಲಿಗೆ' ಮಾಸಪತ್ರಿಕೆಯ ಮೂಲಕ ಪತ್ರಿಕೋದ್ಯಮಕ್ಕೆ ಬಂದು ಕಳೆದ ಎರಡು ದಶಕದಿಂದ ಸಾಂಸ್ಕೃತಿಕ ಪತ್ರಿಕೋದ್ಯಮವನ್ನು ಉಳಿಸುವಲ್ಲಿ ವಿವಿಧ ಪತ್ರಿಕೆಗಳ ಮೂಲಕ ಶ್ರಮಿಸುತ್ತಿದ್ದಾರೆ. ಚಲನಚಿತ್ರ ಇತಿಹಾಸದ ಕುರಿತು ಆಳವಾದ ಅಧ್ಯಯನ ನಡೆಸಿದ್ದಾರೆ. ಇವರು ಸಾಹಿತ್ಯ ಮತ್ತು ಆಧ್ಯಾತ್ಮ ಕ್ಷೇತ್ರದಲ್ಲಿಯೂ ಕೆಲಸ ಮಾಡಿದ್ದಾರೆ. ‘ಸಿಂಹಾವಲೋಕನ, ನಗುವ ನಯನ ಮಧುರ ಮೌನ, ಮಂಜುಳಾ ಎಂಬ ಎಂದೆಂದೂ ಮರೆಯದ ಹಾಡು, ಸಾಹಿತ್ಯ ಸಂವಾದ, ಹಾಡು ಮುಗಿಯುವುದಿಲ್ಲ, ಸಿನಿಮಾ ಎನ್ನುವ ನಾಳೆ’ ಅವರ ಪ್ರಮುಖ ಕೃತಿಗಳು. ಕನ್ನಡ ಚಿತ್ರಗೀತೆಗಳ ಸಾಂಸ್ಕೃತಿಕ ...
READ MORE