ಬದುಕಿನಲ್ಲಿ ಎಂದಾದರೂ ನಮ್ಮನ್ನು ಬೇಸರ, ನಿರಾಸಕ್ತಿ, ಖಿನ್ನತೆ ಕಾಡುತ್ತದೆ. ಆಗ ಹಸಿವು, ನಿದ್ರೆ, ಲೈಂಗಿಕ ಕ್ರಿಯೆಯಲ್ಲಿ ಏರುಪೇರುಗಳಾಗುತ್ತದೆ. ಆಗ ನಿಮ್ಮ ಮನೋಬಲವನ್ನು ಹೆಚ್ಚಿಸಿಕೊಳ್ಳುವುದು ಹೇಗೆ? ಅರ್ಥಪೂರ್ಣ ಬದುಕನ್ನು ಸಾಗಿಸಲು ಈ ಪುಸ್ತಕ ನೆರವಾಗುತ್ತದೆ. ನಿಮ್ಮಮಾನಸಿಕ ರೋಗಗಳಿಗೆ, ಮನದಲ್ಲಿ ಮೂಡುವ ಹಲವು ಪ್ರಶ್ನೆಗಳಿಗೆ ವಿವರವಾಗಿ ಇಲ್ಲಿ ಲೇಖಕರು ಉತ್ತರ ನೀಡಿದ್ದಾರೆ.
ಡಾ. ಸಿ.ಆರ್. ಚಂದ್ರಶೇಖರ್ ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ರಾಷ್ಟ್ರೀಯ ಮನೋರೋಗ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉಪ ಆರೋಗ್ಯ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮನೋವಿಜ್ಞಾನ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯುಳ್ಳ ಹಿರಿಯ ವೈದ್ಯರು ರೋಗಿಗಳ ಶುಶ್ರೂಷೆ, ಬೋಧನೆ ಮತ್ತು ತರಬೇತಿ ನೀಡುತ್ತಿರುವುದರ ಜೊತೆಗೆ ಕಳೆದ 30 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. 150 ಕ್ಕೂ ಹೆಚ್ಚು ಮನೋವಿಜ್ಞಾನದ ಬಗ್ಗೆ ಕನ್ನಡದಲ್ಲಿ ರಚಿಸಿರುವ ಇವರ ಹಲವು ಪುಸ್ತಕಗಳು ತೆಲುಗು, ಉರ್ದು, ಗುಜರಾತಿ, ಹಿಂದಿ ಭಾಷೆಗಳಿಗೆ ಅನುವಾದಗೊಂಡಿವೆ. 1000 ಕ್ಕೂ ಹೆಚ್ಚು ಪ್ರೌಢ ಲೇಖನಗಳನ್ನು ಬರೆದಿದ್ದಾರೆ. ...
READ MORE