`ಅಬ್ಬಾಲಕ್ಕ ಅಜ್ಜೀಮನೆಗೆ ಹೋಗಿದ್ದು' ಈ ಮಕ್ಕಳ ಕಥಾ ಸಂಕಲನವನ್ನು ಲೇಖಕಿ ವೈದೇಹಿ ರಚಿಸಿದ್ದಾರೆ. ಮಕ್ಕಳನ್ನು ಎದುರಿಗೆ ಕೂಡಿಸಿಕೊಂಡು ಹೇಳಿದಂತಿರುವ ಈ ಕಥೆಗಳು ಆಕರ್ಷಕ ಶೈಲಿ, ನಾಟಕೀಯ ನಿರೂಪಣೆಗಳ ಮೂಲಕ ಮಕ್ಕಳ ಕಥೆಗಳು ಹೇಗಿರಬೇಕು ಎಂಬುದಕ್ಕೆ ಮಾದರಿಯಾಗಿವೆ. ಈ ಕಥೆಗಳು, ಮಕ್ಕಳಿಗಷ್ಟೇ ಅಲ್ಲದೆ ದೊಡ್ಡವರಿಗೂ ಸಂತೋಷ ನೀಡುತ್ತವೆ. ನೀತಿ ಕಥೆಗಳಿಂದ ತುಂಬಿರುವ ಮಕ್ಕಳ ಕಥೆಗಳಿಗಿಂತ ಇವು ವಿಭಿನ್ನವಾಗಿವೆ. ವಾಸ್ತವಗಳ ಕಲಬೆರಕೆಗೆ ಇನ್ನೊಂದು ಆಯಾಮವನ್ನೇ ಕೊಡಬಲ್ಲಂಥ ಕೃತಿ ಇದಾಗಿದೆ ಎಂದು ಪುಸ್ತಕದ ಕುರಿತಾಗಿ ವಿವರಿಸಲಾಗಿದೆ.
ಡಾ. ವೈದೇಹಿ ಅವರ ಮೂಲ ಹೆಸರು ಜಾನಕಿ ಶ್ರೀನಿವಾಸಮೂರ್ತಿ. ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಜನಿಸಿದ ಅವರು ಕಾವ್ಯ, ಪ್ರಬಂಧ, ಮಕ್ಕಳ ಸಾಹಿತ್ಯ, ಜೀವನಚಿತ್ರ, ಕೃತಿ ಸಂಪಾದನೆ ಪ್ರಕಾರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಮಾನವ ಸಹಜ ಸಂಬಂಧಗಳು ಮತ್ತು ಹೆಣ್ಣಿನ ಭಾವತರಂಗಗಳನ್ನು ಹಿಡಿದಿಡುವ ಕಥೆ-ಕಾದಂಬರಿ ರಚಿಸಿರುವ ಲೇಖಕಿ. ಮರಗಿಡಬಳ್ಳಿ ಅಂತರಂಗದ ಪುಟಗಳು ಸಮಾಜಶಾಸ್ತ್ರಜ್ಞೆಯ ಟಿಪ್ಪಣಿಗಳು, ಅಮ್ಮಚ್ಚಿ ಎಂಬ ನೆನಪು. ಕತೆ ಕತೆ ಕಾರಣ (ಕಥಾ ಸಂಕಲನಗಳು), ಅಲೆಗಳಲ್ಲಿ ತರಂಗ (ಸಮಗ್ರ ಕಥಾ ಸಂಕಲನ), ಬಿಂದು ಬಿಂದಿಗೆ, ಪಾರಿಜಾತ ಹೂವ ಕಟ್ಟುವ ಕಾಯಕ (ಕವನ ಸಂಕಲನ), ಅಸ್ಪೃಶ್ಯರು (ಕಾದಂಬರಿ), ಮಲ್ಲಿನಾಥನ ಧ್ಯಾನ, ಮೇಜು ಮತ್ತು ...
READ MORE