“ನಾಡಿಗೆ ನಮಸ್ಕಾರ” ಎನ್ನುವುದು ಕಾಂತಾವರ ಕನ್ನಡ ಸಂಘವು ಮೂವತ್ತಕ್ಕೆ ಕಾಲಿಟ್ಟದ್ದನ್ನು ನೆನಪಿಸುವ ಮತ್ತು ಗುರುತಿಸುವ ಗ್ರಂಥಮಾಲೆ. ಈ ಮಾಲಿಕೆಯಲ್ಲಿ ಪ್ರಕಟವಾದ ಕೃತಿ ‘ಆದರ್ಶಗುರು, ಜಾನಪದ ವಿದ್ವಾಂಸ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್’. ಈ ಕೃತಿಯನ್ನು ಡಾ.ವಸಂತಕುಮಾರ್ ಪೆರ್ಲ ರಚಿಸಿದ್ದಾರೆ. ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರು ದ್ಕಷಿಣ ಕನ್ನಡ ಜಿಲ್ಲೆಯ ಜಾನಪದ ಕಲೆಗಳನ್ನು ಪೋಷಿಸಿ, ಬೆಳೆಸುವಲ್ಲಿ ಕೈಗೊಂಡ ನಿರ್ಧಾರಗಳು ಹಾಗೂ ಶ್ರಮದ ಬಗ್ಗೆ ಈ ಕೃತಿಯಲ್ಲಿ ಲೇಖಕರು ಅಚ್ಚುಕಟ್ಟಾದ ಮಾಹಿತಿಯನ್ನು ನೀಡಿದ್ದಾರೆ.
ಯಕ್ಷಗಾನ, ಸಾಹಿತ್ಯ, ಶಿಕ್ಷಣ, ಧಾರ್ಮಿಕ, ವೈದಿಕ ಹೀಗೆ ಹಲವು ಕ್ಷೇತ್ರಗಳಲ್ಲಿ ಹೆಸರುಗಳಿಸಿರುವ ಲೇಖಕ ವಸಂತಕುಮಾರ ಪೆರ್ಲ. ಅವರು ಕಾಸರಗೋಡಿನ ಪುಟ್ಟ ಊರಾದ ಪೆರ್ಲದಲ್ಲಿ 1958ರ ಜುಲೈ 2ರಂದು ಜನಿಸಿದರು. ಈ ಪೆರ್ಲ ಭರಿನ ಹೆಸರಿಗೆ ಕೀರ್ತಿ ತಂದವರಲ್ಲಿ ವಸಂತಕುಮಾರ್ ಒಬ್ಬರು. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಪಳತ್ಕ್ತಡ್ಕ ಶಾಲೆಯಲ್ಲಿ ಮತ್ತು ಪ್ರೌಢಶಿಕ್ಷಣವನ್ನು ಪೆರ್ಲ ಸತ್ಯನಾರಾಯಣ ಹೈಸ್ಕೂಲಿನಲ್ಲಿ ಪೂರೈಸಿದರು. ಪದವಿ, ಉನ್ನತ ಪದವಿಯನ್ನು ಮತ್ತು ರಂಗಭೂಮಿ ವಿಷಯದಲ್ಲಿ ಡಾಕ್ಟರೇಟ್. ಪತ್ರಿಕೋದ್ಯಮದಲ್ಲಿ ಡಿಪ್ಲೊಮಾ ಪದವಿ ಪಡೆದಿದ್ದಾರೆೆ. ಹೈಸ್ಕೂಲ್ ವಿದ್ಯಾಭ್ಯಾಸದ ಕಾಲದಲ್ಲೇ ಕಥೆಗಳನ್ನು ಬರೆಯ ತೊಡಗಿದ ಅವರು ಬೆಂಗಳೂರಿನ ಪ್ರಜಾಪ್ರಭುತ್ವ ವಾರಪತ್ರಿಕೆಯಲ್ಲಿ ಉಪಸಂಪಾದಕ-ವರದಿಗಾರರಾಗಿ ಔದ್ಯೋಗಿಕ ...
READ MORE