‘ಅಜ್ಜಿ ಹೇಳಿದ 101 ಕಥೆಗಳು’ ಕುನ್ವರ್ ಅನಿಲ್ ಕುಮಾರ್ ಅವರ ಕತೆಗಳ ಕನ್ನಡಾನುವಾದ. ಪತ್ರಕರ್ತ, ಲೇಖಕ ಜಿ.ಕೆ. ಮಧ್ಯಸ್ಥ ಅವರು ಮಕ್ಕಳಿಗಾಗಿ ಈ ಕೃತಿಯನ್ನು ರಚಿಸಿದ್ದಾರೆ. ಮಕ್ಕಳ ಭವಿಷ್ಯಕ್ಕೆ ಉತ್ತಮ ಬುನಾದಿ ಹಾಕುವಂತಹ ನೀತಿ, ಶಿಸ್ತು, ಮೌಲ್ಯಗಳನ್ನು ಬಿಂಬಿಸುವ ಮನೋರಂಜಕ ಕತೆಗಳು ಈ ಕೃತಿಯಲ್ಲಿ ಸಂಕಲನಗೊಂಡಿವೆ.
ಸಾಹಿತ್ಯ ಮತ್ತು ಪತ್ರಿಕೋದ್ಯಮ ಎರಡರಲ್ಲೂ ಸಮಾನ ಆಸಕ್ತಿ ಇರುವ ಗೋಪಾಲ ಕೃಷ್ಣ ಮಧ್ಯಸ್ಥ (ಜಿ.ಕೆ. ಮಧ್ಯಸ್ಥ) ಅವರು ಪ್ರಜಾವಾಣಿ, ವಿಜಯ ಕರ್ನಾಟಕ ಸೇರಿದಂತೆ ಕನ್ನಡದ ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ. ಪತ್ರಿಕೆಗಳ ಭಾಷೆಯ ಬಳಕೆ ಮತ್ತು ಬದಲಾವಣೆಯನ್ನು ವಿಶ್ಲೇಷಣೆ ಮಾಡುತ್ತಾರೆ. ನಿವೃತ್ತಿಯ ನಂತರ ಉಡುಪಿಯಲ್ಲಿ ನೆಲೆಸಿರುವ ಅವರು ‘ದುಡ್ಡು ಕಾಸು', 'ಪದೋನ್ನತಿ' ಎಂಬ ಎರಡು ಅಂಕಣ ಬರಹಗಳನ್ನು ಪುಸ್ತಕಗಳಾಗಿ ಪ್ರಕಟಿಸಿದ್ದಾರೆ. ಗೋಪಾಲಕೃಷ್ಣ ಮಧ್ಯಸ್ಥ ಜನಿಸಿದ್ದು ಕಾಸರಗೋಡು ಸಮೀಪದ ಕುಂಜ್ಯಾರುವಿನಲ್ಲಿ. ...
READ MORE