‘ಅಕ್ಬರ್ - ಬೀರ್ ಬಲ್- ಚತುರ ಕಥೆಗಳು’ ಮಕ್ಕಳಿಗಾಗಿ ಪತ್ರಕರ್ತ, ಲೇಖಕ ಜಿ.ಕೆ. ಮಧ್ಯಸ್ಥ ಅವರು ಬರೆದ ಕತೆಗಳ ಸಂಕಲನ. ಮಕ್ಕಳ ಮನೋವಿಕಾಸದಲ್ಲಿ ಕತೆಗಳದ್ದು ಪ್ರಮುಖ ಪಾತ್ರವಿದೆ. ನೀತಿ ಕತೆಗಳು, ಚತುರ ಕತೆಗಳು ಮಕ್ಕಳ ಆಲೋಚನಾ ಶಕ್ತಿ ಮತ್ತು ಕಲ್ಪನಾ ಶಕ್ತಿಯ ಬೆಳವಣಿಗೆಯ ಮೇಲೆ ಪ್ರಭಾವ ಬೀರುತ್ತವೆ. ಹಾಗಾಗಿ ಮಕ್ಕಳ ಸಾಹಿತ್ಯಿಕ ಕೃತಿಗಳಲ್ಲಿ ಅಕ್ಬರ್-ಬೀರ್ ಬಲ್- ಚತುರ ಕಥೆಗಳು ಕೃತಿಯೂ ಒಂದಾಗಿದೆ.
ಸಾಹಿತ್ಯ ಮತ್ತು ಪತ್ರಿಕೋದ್ಯಮ ಎರಡರಲ್ಲೂ ಸಮಾನ ಆಸಕ್ತಿ ಇರುವ ಗೋಪಾಲ ಕೃಷ್ಣ ಮಧ್ಯಸ್ಥ (ಜಿ.ಕೆ. ಮಧ್ಯಸ್ಥ) ಅವರು ಪ್ರಜಾವಾಣಿ, ವಿಜಯ ಕರ್ನಾಟಕ ಸೇರಿದಂತೆ ಕನ್ನಡದ ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ. ಪತ್ರಿಕೆಗಳ ಭಾಷೆಯ ಬಳಕೆ ಮತ್ತು ಬದಲಾವಣೆಯನ್ನು ವಿಶ್ಲೇಷಣೆ ಮಾಡುತ್ತಾರೆ. ನಿವೃತ್ತಿಯ ನಂತರ ಉಡುಪಿಯಲ್ಲಿ ನೆಲೆಸಿರುವ ಅವರು ‘ದುಡ್ಡು ಕಾಸು', 'ಪದೋನ್ನತಿ' ಎಂಬ ಎರಡು ಅಂಕಣ ಬರಹಗಳನ್ನು ಪುಸ್ತಕಗಳಾಗಿ ಪ್ರಕಟಿಸಿದ್ದಾರೆ. ಗೋಪಾಲಕೃಷ್ಣ ಮಧ್ಯಸ್ಥ ಜನಿಸಿದ್ದು ಕಾಸರಗೋಡು ಸಮೀಪದ ಕುಂಜ್ಯಾರುವಿನಲ್ಲಿ. ...
READ MORE