‘ಅಕ್ಬರ್-ಬೀರಬಲ್ ಕಥೆಗಳು’ ಮಕ್ಕಳಿಗಾಗಿ ಕುನ್ವರ್ ಅನಿಲ್ ಕುಮಾರ್ ಅವರ ಇಂಗ್ಲಿಷ್ ಕೃತಿಯನ್ನು ಪತ್ರಕರ್ತ, ಲೇಖಕ ಜಿ.ಕೆ. ಮಧ್ಯಸ್ಥ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಇಲ್ಲಿ ಚರಿತ್ರೆಯ ಇಬ್ಬರು ಮಹಾವ್ಯಕ್ತಿಗಳು ಪಾತ್ರಧಾರಿಗಳೆನಿಸುವಂತಹ ಹಲವು ಕತೆಗಳಿವೆ. ಹಾಸ್ಯ ಮತ್ತು ಬುದ್ಧಿವಂತಿಕೆಗೆ ಹೆಸರಾದ ಅಕ್ಬರ್ ಮತ್ತು ಬೀರ್ ಬಲ್ ಕತೆಗಳನ್ನು ಮಕ್ಕಳಿಗಾಗಿ ಸರಳ ಭಾಷೆಯಲ್ಲಿ ಬರೆಯಲಾಗಿದೆ.
ಸಾಹಿತ್ಯ ಮತ್ತು ಪತ್ರಿಕೋದ್ಯಮ ಎರಡರಲ್ಲೂ ಸಮಾನ ಆಸಕ್ತಿ ಇರುವ ಗೋಪಾಲ ಕೃಷ್ಣ ಮಧ್ಯಸ್ಥ (ಜಿ.ಕೆ. ಮಧ್ಯಸ್ಥ) ಅವರು ಪ್ರಜಾವಾಣಿ, ವಿಜಯ ಕರ್ನಾಟಕ ಸೇರಿದಂತೆ ಕನ್ನಡದ ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ. ಪತ್ರಿಕೆಗಳ ಭಾಷೆಯ ಬಳಕೆ ಮತ್ತು ಬದಲಾವಣೆಯನ್ನು ವಿಶ್ಲೇಷಣೆ ಮಾಡುತ್ತಾರೆ. ನಿವೃತ್ತಿಯ ನಂತರ ಉಡುಪಿಯಲ್ಲಿ ನೆಲೆಸಿರುವ ಅವರು ‘ದುಡ್ಡು ಕಾಸು', 'ಪದೋನ್ನತಿ' ಎಂಬ ಎರಡು ಅಂಕಣ ಬರಹಗಳನ್ನು ಪುಸ್ತಕಗಳಾಗಿ ಪ್ರಕಟಿಸಿದ್ದಾರೆ. ಗೋಪಾಲಕೃಷ್ಣ ಮಧ್ಯಸ್ಥ ಜನಿಸಿದ್ದು ಕಾಸರಗೋಡು ಸಮೀಪದ ಕುಂಜ್ಯಾರುವಿನಲ್ಲಿ. ...
READ MORE