ಲೇಖಕ ಸಂತೋಷ ಕುಮಾರ್ ಮೆಹೆಂದೆಳೆ ಅವರ ಪ್ರವಾಸಕ್ಕೆ ಸಂಬಂಧಪಟ್ಟ ಲೇಖನಗಳ ಸಂಕಲನ ಕೃತಿ ʻಅಲೆಮಾರಿಯ ಡೈರಿʼ. ಕನ್ನಡ ಪತ್ರಿಕೆಯೊಂದಕ್ಕೆ ಸಂತೋಷ್ ಅವರು ಬರೆಯುತ್ತಿದ್ದ ಅಂಕಣಗಳನ್ನು ಒಟ್ಟುಸೇರಿಸಿ ಪುಸ್ತಕದ ರೂಪದಲ್ಲಿ ತಂದಿದ್ದಾರೆ. ಬಹುತೇಕ ಪ್ರವಾಸಿಗರು ಹೋಗಲು ಅಂಜುವ, ಸುಲಭವಾಗಿ ಹೋಗಿಬರಲು ಸಾಧ್ಯವಾಗದಂತಹ ಸ್ಥಳಗಳ ಕುರಿತು, ಅವುಗಳ ವಿಶೇಷತೆಗಳನ್ನು ಇಲ್ಲಿ ಪರಿಚಯಿಸಿದ್ದಾರೆ. ದೇಶದ ಈಶಾನ್ಯ ಹಾಗು ಉತ್ತರ ಗಡಿ ಭಾಗದಲ್ಲಿರುವ ಸುಮಾರು 46 ಪ್ರವಾಸ ಜಾಗಗಳ ವಿವರಣೆ ಇಲ್ಲಿದೆ.
ಕನ್ನಡ ಪ್ರಮುಖ ಕಾದಂಬರಿಕಾರ, ಅಂಕಣಗಾರ, ಕಥೆಗಾರ, ವೈಜ್ಞಾನಿಕ ಮತ್ತು ಪರಿಸರ ಸಂಬಂಧಿ ಬರಹಗಾರರಲ್ಲಿ ಸಂತೋಷ್ ಮೆಹಂದಳೆಯವರು ಒಬ್ಬರು. ಅವರು ಸಣ್ಣ ಕಥೆಗಳು, ಕಾದಂಬರಿಗಳು, ಸಾಮಾಜಿಕ ಮತ್ತು ವೈಜ್ಞಾನಿಕ ಲೇಖನಗಳು, ಪರಿಸರ ಸಂಬಂಧಿ ಚಿತ್ರ ಲೇಖನಗಳು, ಅಂಕಣ ಬರಹಗಳು, ಪತ್ತೆದಾರಿ ಮತ್ತು ವೈಜ್ಞಾನಿಕ ಕಥಾ ಸಾಹಿತ್ಯ, ಪ್ರವಾಸಿ ಕಥನಗಳು, ಸೈನ್ಸ್ ಫಿಕ್ಷನ್, ಛಾಯಾಗ್ರಹಣ ಮತ್ತು ಅಷ್ಟೆ ಜವಾಬ್ದಾರಿಯುತವಾಗಿ ಪಟ್ಟಾಗಿ ಬರೆಯಬಲ್ಲ ದೈತ್ಯ ಕಸುವಿನ ಸಾಹಿತ್ಯಿಕ ಕಸುಬುದಾರರು. " ತರಂಗ, ಕರ್ಮವೀರ ಸುಧಾ ಪ್ರಜಾವಾಣಿ, ವಿಜಯವಾಣಿ, ಸಂಯುಕ್ತ ಕರ್ನಾಟಕ, ಉದಯವಾಣಿ, ವಿಜಯ ಕರ್ನಾಟಕ, ಓ ಮನಸೇ, ತುಷಾರ, ಮಯೂರ, ಕನ್ನಡ ಪ್ರಭ, ಕಸ್ತೂರಿ, ಉತ್ಥಾನ ಮತ್ತು ಪ್ರತಿ ವರ್ಷದ ...
READ MORE