`ಅಪೂರ್ವ’ ಕೆ. ಎಂ. ಸೀತಾರಾಮಯ್ಯ ಅವರ ಪ್ರವಾಸ ಕಥನವಾಗಿದೆ. ಅತ್ಯಂತ ಗೌರವಾನ್ವಿತ ಅತಿಥಿಯಂತೆ ಅಮೆರಿಕಕ್ಕೆ ಭೇಟಿ ನೀಡಿದ ಲೇಖಕರು ತಮ್ಮ ಅಲ್ಲಿನ ಅಪೂರ್ವ ಅನುಭವ ಸಂಗ್ರಹಿಸಿದ ಮಾಹಿತಿಗಳನ್ನು ಉತ್ಸಾಹದಿಂದ ನಮಗೆ ತಿಳಿಸುತ್ತಾರೆ. ಉತ್ತಮವಾದ ಅಲ್ಲಿನ ವ್ಯವಸ್ಥೆಯನ್ನೆಲ್ಲ ಮುಕ್ತಕಂಠದಿಂದ ಶ್ಲಾಘಿಸಿ ಸ್ವದೇಶವನ್ನು ಎಲ್ಲೂ ತೆಗಳದೆ ನಾವೆಷ್ಟು ಹಿಂದಿದ್ದೇವೆಂದೂ ವಿಷಾದದಿಂದ ಲೆಕ್ಕ ಹಾಕುತ್ತಾರೆ. ವಿದೇಶವೆಷ್ಟು ಹಿತವೋ ಅದಕ್ಕಿಂತ ಹಿತವಾದ ನುಡಿ : ''ಜನನೀ ಜನ್ಮ ಭೂಮಿಶ್ಚ ಸ್ವರ್ಗಾದಪಿ ಗರೀಯಸೀ' ಎಂಬ ಅರ್ಥಪೂರ್ಣ ಮುಕ್ತಾಯ ಹಾಡಿದ್ದಾರೆ.
ಕೆ.ಎಂ.ಸೀತಾರಾಮಯ್ಯನವರು 1929 ಅಕ್ಟೋಬರ್ 10ರಂದು ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಕೆಂಪಸಾಗರದಲ್ಲಿ ಜನಿಸಿದರು. ತಾಯಿ ವೆಂಕಟಲಕ್ಷ್ಮಮ್ಮ, ತಂದೆ ಕೆ.ಮೈಲಾರಯ್ಯ. ಅರಸೀಕೆರೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಸೀತಾರಾಮಯ್ಯನವರು ಹಾಸನದಲ್ಲಿ ಇಂಟರ್ ಮೀಡಿಯೇಟ್ ಶಿಕ್ಷಣ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎ ಪದವಿ ಪಡೆದರು. ಮೈಸೂರು ವಿಶ್ವವಿದ್ಯಾಲದಿಂದ ಸ್ನಾತಕೋತ್ತರ ಪದವಿ ಪಡೆದರು. ಅಧ್ಯಾಪಕರಾಗಿ ವೃತ್ತಿ ಆರಂಭಿಸಿ ರಾಜ್ಯದ ನಾನಾ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾದರು. ಅವರು 2023 ನ. 20 ರಂದು ನಿಧನರಾದರು. ಸೀತಾರಾಮಯ್ಯನವರ ಪ್ರಮುಖ ಕೃತಿಗಳೆಂದರೆ ಸಪ್ತಸ್ವರ, ಮಾನಸಪೂಜೆ, ರಾಜರಹಸ್ಯ, ಸಂನ್ಯಾಸಿ, ಇಲಿಯಡ್ ಮತ್ತು ಒಡಿಸ್ಸಿಗಳನ್ನು ಕನ್ನಡಕ್ಕೆ ...
READ MORE