ಸಮಾಜದಲ್ಲಿ ಪ್ರತಿಯೊಬ್ಬ ಜಾತಿಯವರಿಗೆ ಸಮಾಜವೇ ನಿರ್ಣಯಿಸಿ ನೀಡಿದ ವ್ಯವಸಾಯ ಇರುತ್ತದೆ. ಆದರೆ, ಅಲೆಮಾರಿ ಸಮುದಾಯಕ್ಕೆ ಸೇರಿದ ಬಡಜನರ ತಂಡವೊಂದು ಸ್ವಂತ ವ್ಯವಸಾಯವನ್ನು ಹೊಂದಿರದೆ, ಹೊಟ್ಟೆ ಪಾಡಿಗಾಗಿ ಊರಿನವರ ಮನೆಬಾಗಿಲಲ್ಲಿ, ಹೊಲದಲ್ಲಿ ಜೀತದಾಳುಗಳಾಗಿ ದುಡಿಯುತ್ತಾ, ಬರಗಾಲದ ದಿನಗಳಲ್ಲಿ ನೀರಿನಾಶ್ರಯವನ್ನು ಅರಸಿ ಮತ್ತೊಂದು ಪ್ರದೇಶಕ್ಕೆ ಹೋದಾಗ, ಶೋಷಕ ವರ್ಗದ ಕೈಸೆರೆಯಾಗಿ ಅಪಾರ ಕಷ್ಟನಷ್ಟಗಳನ್ನು ಅನುಭವಿಸಿ, ಕ್ರಮೇಣ ಕಾಡು ಪಾಲಾಗಿ, ಜೀವಹಾನಿಯನ್ನು ಭರಿಸಬೇಕಾದ ರುದ್ರಭಯಾನಕ ಚಿತ್ರಣವನ್ನು ಈ ಕಾದಂಬರಿ ಹೃದಯಸ್ಪರ್ಶಿಯಾಗಿ ಕಟ್ಟಿಕೊಟ್ಟಿದೆ. ಅಲಕ್ಷಿತ ಸಮುದಾಯಗಳ ಹಾಗೂ ಅಳಿವಿನ ಅಂಚಿನಲ್ಲಿರುವ ಗ್ರಾಮೀಣ ವೃತ್ತಿಗಳ ಕುರಿತು ಅಪಾರ ಕಾಳಜಿ ಹೊಂದಿದ ಲೇಖಕರು ಈ ಕಾದಂಬರಿ ರಚಿಸಿದ್ದಾರೆ. ಗೀತಾ ಶೆಣೈ ಅವರು ಕೊಂಕಣಿ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.
ಗೀತಾ ಶೆಣೈ ಕನ್ನಡದ ಪ್ರಮುಖ ಲೇಖಕಿ. ಇವರು 1954 ಜೂಬ್ 13 ರಂದು ದಕ್ಷಿಣ ಜಿಲ್ಲೆಯಲ್ಲಿ ಜನಿಸಿದರು. ಹಂಪಿಯಿಂದ ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಪಿಹೆಚ್.ಡಿ, ಪದವಿ ಪಡೆದಿದ್ದಾರೆ. ಇಂದಿರಾಗಾಂಧಿ ಮಹಿಳಾ ಅಧ್ಯಯನದಲ್ಲಿ ಸಿಡಬ್ಲ್ಯೂಇಡಿ ಕೋರ್ಸ್ ಮುಗಿಸಿದ್ದಾರೆ, ಜೀವನ ಚರಿತ್ರೆ, ಅನುವಾದ ಮತ್ತು ಮಹಿಳಾ ಅಧ್ಯಯನ ಇತ್ಯಾದಿ ಪ್ರಕಾರಗಳಲ್ಲಿ 20ಕ್ಕೂ ಹೆಚ್ಚು ಗ್ರಂಥಗಳನ್ನು ಪ್ರಕಟಿಸಿದ್ದಾರೆ. ಇವರ ಮೊದಲ ಕೃತಿ ಝುಂಪಾ ಲಾಹಿರಿಯವರ ಇಂಟರ್ಪ್ರಿಟರ್ ಆಫ್ ಮ್ಯಾಲಡೀಸ್ ಕಥಾಸಂಕಲನದ ಅನುವಾದ `ಬೇನೆಗಳ ದುಭಾಷಿ'. ಬೇನೆಗಳ ದುಭಾಷಿ, ಪರಿಸರ ಅರ್ಥಶಾಸ್ತ್, ಮಧ್ಯಕಾಲೀನ ಭಾರತ, ಸಮಾಜಶಾಸ್ತ್ರದ ಸ್ಥಾಪಕ ಪಿತಾಮಹರು, ಪ್ರಾರಂಭಿಕ ಹಂತದ ...
READ MORE