ನಮ್ಮ ದೇಹ ಮನಸ್ಸಿನ ಆರೋಗ್ಯ ಕಾಯ್ದುಕೊಳ್ಳುವಲ್ಲಿ ತಿರುವಳ್ಳುವರ್, ಬಸವಣ್ಣ, ಅಕ್ಕಮಹಾದೇವಿ, ಪುರಂದರ ದಾಸ ಸರ್ವಜ್ಞರಂತಹ ಚಿಂತಕರು ನೀಡಿದ ಅನುಪಾನದ ಮಹತ್ವ, ವಿಶ್ಲೇಷಣೆಯನ್ನು ಈ ಕೃತಿಯು ಒಳಗೊಂಡಿದೆ. ಒಗಟುಗಳಲ್ಲಿ ಶರೀರ, ವರ್ಣದಂಡಗಳ ತುದಿ, ಬದಲಾಗುತ್ತಿರುವ ಹವಾಮಾನ, ನಗರೀಕರಣ, ಆಧುನೀಕರಣ, ಆಸ್ಪತ್ರೆಗಳು, ವೈದ್ಯ ಸಾಹಿತ್ಯ ಮೊದಲಾದ ಸಂಗತಿಗಳ ಕುರಿತು ವಿವರಗಳನ್ನು ಈ ಕೃತಿಯಲ್ಲಿ ಒದಗಿಸಿದ್ದಾರೆ. ಮನುಷ್ಯ ಜೀವನದಲ್ಲಿ ನಗುವಿನ ಪಾತ್ರ, ಸುಸ್ತು ಒತ್ತಡವನ್ನು ನಿಭಾಯಿಸುವ ಬಗೆ, ಮಾತು ಮೌನದ ಉಪಯುಕ್ತತೆ ವಿವರಗಳನ್ನು ಒದಗಿಸಲಾಗಿದೆ.
ವೃತ್ತಿಯಲ್ಲಿ ವೈದ್ಯರಾಗಿ ವೈದ್ಯ ಸಾಹಿತಿಯಾಗಿ ಪ್ರಸಿದ್ಧರಾಗಿರುವ ಡಾ.ಪಿ.ಎಸ್.ಶಂಕರ್ ಅವರು 1936 ಜನವರಿ 1ರಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಹಲಗೇರಿಯಲ್ಲಿ ಜನಿಸಿದರು. ಹುಟ್ಟೂರು ಹಾಗೂ ಚಿತ್ರದುರ್ಗದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಇವರು ಮೈಸೂರು ಮತ್ತು ದೆಹಲಿಯಲ್ಲಿ ವೈದ್ಯಕೀಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಲಬುರ್ಗಿಯ ಎಂ.ಆರ್. ಮೆಡಿಕಲ್ ಕಾಲೇಜಿನಲ್ಲಿ ಅಧ್ಯಾಪಕರಾಗಿ, ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದಾರೆ. ವೃದ್ಧಾಪ್ಯದಲ್ಲಿನ ಕಾಯಿಲೆಗಳು, ಹೃದಯ ಜೋಪಾನ, ಕ್ಯಾನ್ಸರ್, ಹೃದಯ ರೋಗ ತಡೆಗಟ್ಟಿ, ಡಾ. ವಿಕ್ರಂ ಸಾರಾಭಾಯ್, ಮುಂತಾದ ಕೃತಿಗಳನ್ನು ರಚಿಸಿದ್ದಾರೆ. ಸೋವಿಯತ್ ಲ್ಯಾಂಡ್ ನೆಹರು ಪ್ರಶಸ್ತಿ, ರಾಕ್ ಫೆಲ್ಲರ್ ಸ್ಕಾಲರ್ ಇನ್ ರೆಸಿಡೆನ್ಸ ಗೌರವ, ಭಾರತ ಸರ್ಕಾರದ ವಿಜ್ಞಾನ ತಂತ್ರಜ್ಞಾನ ಇಲಾಖೆಯ ...
READ MORE