ಆಧುನಿಕ ಭಾರತದ ಅನನ್ಯ ಚಿಂತಕ ಪ್ರೊ. ಅಶೀಶ್ ನಂದಿ. ದೆಹಲಿಯ ಸೆಂಟರ್ ಫಾರ್ ದಿ ಸ್ಟಡಿ ಆಫ್ ಡೆವಲಪಿಂಗ್ ಸೊಸೈಟೀಸ್ ನಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಅಶೀಶ್ ನಂದಿ ಸ್ವಾತಂತ್ಯ್ರೋತ್ತರ ಭಾರತದ ಹಲವು ಘಟ್ಟಗಳನ್ನು ಹತ್ತಿರದಿಂದ ಪರಾಮರ್ಶಿಸಿದವರು.
ಕೃತಿ ಅಶೀಶ್ ನಂದಿ ಅವರು ಕರ್ನಾಟಕದಲ್ಲಿ ಮಾಡಿದ ಎರಡು ಭಾಷಣಗಳು ಹಾಗೂ ಮೂರು ದೀರ್ಘ ಪ್ರಬಂಧಗಳನ್ನು ಕೃತಿ ಒಳಗೊಂಡಿದೆ. ಆಧುನಿಕ ಭಾರತದ ರಾಜಕೀಯ, ಸಾಮಾಜಿಕ ಸಾಂಸ್ಕೃತಿಕ ವಿಚಾರಗಳನ್ನು ಅವರು ಚರ್ಚಿಸಿದ್ದಾರೆ. ಕೆ.ವಿ.ಸುಬ್ಬಣ್ಣ, ಕೆ.ವಿ.ಅಕ್ಷರ, ಜಶವಂತ ಜಾಧವ್ ಹಾಗೂ ಪ್ರೊ. ಕು.ಶಿ.ಹರಿದಾಸ ಭಟ್ಟ ಕನ್ನಡಕ್ಕೆ ಅನುವಾದಿಸಿದ್ದಾರೆ. ಜೊತೆಗೆ ಕನ್ನಡದ ಮೇರು ಚಿಂತಕ ಡಿ. ಆರ್. ನಾಗರಾಜ ಅವರು ಅಶೀಶ್ ಚಿಂತನೆಗಳ ಸ್ವರೂಪದ ಕುರಿತು ಆಡಿರುವ ಮಾತುಗಳನ್ನೂ ಪ್ರಕಟಿಸಲಾಗಿದೆ.
ಕೆ.ವಿ. ಸುಬ್ಬಣ್ಣ ಕನ್ನಡದ ಅಪರೂಪದ ವ್ಯಕ್ತಿಗಳಲ್ಲಿ ಒಬ್ಬರು. ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ. ಎ. ಪದವಿ ಪಡೆದ ನಂತರ ಅವರು ಕೃಷಿಕಾಯಕ ಆರಂಭಿಸಿದರು. ಸಾಹಿತ್ಯ ಕ್ಷೇತ್ರದಲ್ಲಿ ಅವರು ಮಾಡಿದ ಸಾಧನೆ ಅಚ್ಚರಿಪಡುವ ಹಾಗಿದೆ. ಕವಿ, ನಾಟಕಕಾರ, ಅನುವಾದಕರಾಗಿದ್ದ ಅವರು 'ಅಕ್ಷರ ಪ್ರಕಾಶನ' 'ನೀನಾಸಂ ರಂಗ ಚಟುವಟಿಕೆ'ಗಳನ್ನು ನಿರ್ವಹಿಸಿದವರು. ಭಾರತೀಯ ಸಂಸ್ಕೃತಿಗೆ ವಿಶಿಷ್ಟ ಮಾದರಿ ಎನ್ನುವ ಹಾಗೆ ಸಾಹಿತ್ಯಕ, ಸಾಂಸ್ಕೃತಿಕ ಚಟುವಟಿಕೆಗಳನ್ನು ಪುಟ್ಟಹಳ್ಳಿಯಲ್ಲಿ ನಡೆಸಿದ್ದು ಒಂದು ದಾಖಲೆ. ಮ್ಯಾಗ್ಸೆಸ್ಸೆ ಪ್ರಶಸ್ತಿಯಿಂದ ಹೆಗ್ಗೋಡು ಅಂತರರಾಷ್ಟ್ರೀಯ ನಕ್ಷೆಯಲ್ಲಿ ದಾಖಲಾಯಿತು. ಕೆ.ವಿ. ಸುಬ್ಬಣ್ಣ ಒಬ್ಬ ವ್ಯಕ್ತಿಯಲ್ಲ, ಮಹಾನ್ ಶಕ್ತಿ. ಅವರ ಬೆಳವಣಿಗೆ ವೈಯಕ್ತಿಕವಾದದ್ದಲ್ಲ, ಸಾಂಘಿಕವಾದದ್ದು. 'ಅಕ್ಷರ ಪ್ರಕಾಶನದ ಮೂಲಕ , 'ನೀನಾಸಂ' ಮೂಲಕ ಅನೇಕ ಪ್ರತಿಭೆಗಳನ್ನು ಅವರು ...
READ MORE