ಬಾಗೂರು ಭಾವಗೊಳಲು-ಕೃತಿಯು ಕವಿ ಬಾಗೂರು ಮಾರ್ಕಾಂಡೇಯ ಅವರ ಚಿತ್ರಕಲೆ ಮತ್ತು ಸಾಹಿತ್ಯಕ್ಕೆ ಸಂಬಂಧಿಸಿ ಹೆಚ್, ರಾಜಪ್ಪ ಅವರು ತಮ್ಮ ಎಂ.ಫಿಲ್ ಪದವಿಗಾಗಿ ಹಂಪಿಯ ಕನ್ನಡ ವಿ.ವಿ.ಗೆ ಸಲ್ಲಿಸಿದ ಮಹಾಪ್ರಬಂಧ.
ಕವಿ ಬಾಗೂರು ಮಾರ್ಕಾಂಡೇಯ ಅವರ ಚಿತ್ರಕಲೆ, ಕ್ಯಾಮೆರಾದಲ್ಲಿ ಸೆರೆ ಹಿಡಿದ ಛಾಯಾಚಿತ್ರಗಳು, ಪ್ರಶಸ್ತಿಯ ವಿವರಗಳು, ರೇಖಾಚಿತ್ರಗಳು, ಚುಕ್ಕಿಚಿತ್ರಗಳು, ವರ್ಣಚಿತ್ರಗಳು ಹೀಗೆ ಕಲೆ-ಸಾಹಿತ್ಯಕ ಸಾಧನೆಗಳ ಕುರಿತು ಸಮಗ್ರ ವಿವರ ಇಲ್ಲಿದೆ.
ಕವಿ, ಕಲಾವಿದ, ಬಾಗೂರು ಮಾರ್ಕಾಂಡೇಯ ಅವರು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ (ಜನನ: 28-06-1966) ಬಾಗೂರು ಗ್ರಾಮದವರು. ಪರಿಸರ, ಮಕ್ಕಳ ಸಾಹಿತ್ಯ, ಚಿತ್ರಕಲೆ ಸೇರಿದಂತೆ ಸುಮಾರು 54ಕ್ಕೂ ಅಧಿಕ ಕೃತಿಗಳನ್ನು ರಚಿಸಿದ್ದಾರೆ. ಏಕ ವ್ಯಕ್ತಿ ಚಿತ್ರಕಲಾ ಪ್ರದರ್ಶನ, ಬೇರುಗಳು ಚಿತ್ರ ಸರಣಿ ಮೂಲಕ ಪರಿಸರ ಜಾಗೃತಿಗೆ ಶ್ರಮಿಸಿದವರು, ‘ರೇಖೆಗಳಲ್ಲಿ ಭಾವಗೀತೆಗಳು’ ಮೂಲಕ ನೂತನ ಪ್ರಯೋಗಶೀಲತೆ ರೂಢಿಸಿಕೊಂಡವರು. ಕನ್ನಡದ ಸುಲಭ ಕಲಿಕೆಗೆ “ಕನ್ನಡ ಸೌರಭ” ತಂತ್ರಾಂಶ ತಯಾರಿಸಿದ್ದಾರೆ. “ಬಾಗೂರು ಕಲಾ ವೇದಿಕೆ ಟ್ರಸ್ಟ್” ರಚಿಸಿಕೊಂಡು ‘ಕಲಾ ಭೂಷಣ’ ಪ್ರಶಸ್ತಿ ನೀಡುತ್ತಾ ಬಂದಿದ್ದಾರೆ ಕವನ ಸಂಕಲನಗಳು: ರೇಖಾಂತರಂಗದ ಭಾವಗುಸುಮ, ಭಾವಶಿಲ್ಪ, ಭಾವೋನ್ಮಾದಿನಿ, ಭಾವಸಮ್ಮಿಲನ, ಕೊಳಲದನಿ, ಕಾವ್ಯಕನ್ನಿಕೆ, ಚೈತ್ರ ಚೆಲುವು, ಸುವರ್ಣಪುತ್ಥಳಿ, ಸ್ವರಸಿರಿಯ ಸ್ನೇಹಲತೆ, ರಾಧಾ ಮಾಧವರ ಒಲುಮೆ ...
READ MORE