‘ಬದುಕಿನ ಸತ್ಯವನ್ನರಸಿದ ಕತೆಗಾರ ಬಾಗಲೋಡಿ ದೇವರಾಯ’ ನಾಡಿಗೆ ನಮಸ್ಕಾರ ಸಾಹಿತ್ಯ ಸಂಸ್ಕೃತಿ ಚಿಂತನ ಗ್ರಂಥಮಾಲಿಕೆಯಲ್ಲಿ ಪ್ರಕಟವಾದಪ್ರೊ. ಬಿ. ಸುರೇಂದ್ರರಾವ್ ಅವರ ಕೃತಿ. ಈ ಮಾಲಿಕೆಯ ಸಂಪಾದಕರಾಗಿದ್ದ ಡಾ.ಬಿ. ಜನಾರ್ದನ ಭಟ್ ತಮ್ಮ ಸಂಪಾದಕೀಯ ನುಡಿಗಳಲ್ಲಿ ಈ ಕೃತಿಯ ಕುರಿತು ಬರೆದಿದ್ದಾರೆ. ಒಂದು ಪ್ರದೇಶದ ಬದುಕು ಸುಸಂಸ್ಕೃತವೆಸಿಕೊಳ್ಳಬೇಕಾದರೆ ಅಲ್ಲಿನ ಪ್ರತಿಭಾವಂತ ಪ್ರಜೆಗಳು ವಿವಿಧ ಕ್ಷೇತ್ರಗಳಲ್ಲಿ ಸಮಾಜದ ಒಳಿತಿಗಾಗಿ ದುಡಿಯಬೇಕಾಗುತ್ತದೆ. ಹೊಟ್ಟೆಯೇ ಕೇಂದ್ರವಾಗಿದೆ ನರನ ಜೀವಿತಕ್ಕೆ ಎಂಬಂತಹ ಪರಿಸ್ಥಿತಿ ಇದ್ದಾಗ ಇಂತಹ ಸಂಸ್ಕೃತಿ ಬೆಳೆಯಲಾರದು. ಗ್ರೀಕ್ ಚಿಂತಕ ಲಾಂಜೈನಸ್ ನ ವಿಚಾರಗಳನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ರಾಜ ಪ್ರಭುತ್ವದಡಿ ಸ್ವಾತಂತ್ರ್ಯ ಇಲ್ಲದ ಕಾರಣ ಪ್ರತಿಭೆ ಮುರುಟಿ ಹೋಗುತ್ತದೆ. ಪ್ರಜಾ ಪ್ರಭುತ್ವದಲ್ಲಿ ಸೃಷ್ಟಿಕಾರ್ಯ ಪ್ರಗತಿಪಥದಲ್ಲಿ ಸಾಗುತ್ತದೆ ಎನ್ನುವ ಮಾತುಗಳನ್ನು ಒಪ್ಪದೆ ಅವನು ಜನರ ನೈತಿಕ ಅಧಃಪತನದಲ್ಲಿ ಪ್ರತಿಭೆಯ ಅವನತಿ ಮತ್ತು ದುರ್ಗತಿಗೆ ಕಾರಣವನ್ನು ಗುರುತಿಸುತ್ತಾನೆ. ಧನಲೋಭ, ಭ್ರಷ್ಟಾಚಾರ, ಸುಖಲೋಲುಪತೆ, ಸ್ವಾರ್ಧಗಳ ಪರಿಣಾಮವಾಗಿ ಹುಟ್ಟಿಕೊಳ್ಳುವ ನಿರ್ಲಜ್ಜ ಮನೋವೃತ್ತಿ, ಆದರ್ಶ ವಿಮುಖತೆ ಇವುಗಳಿಂದಾಗಿ ಆತ್ಮಶಕ್ತಿ ಕುಗ್ಗಿಸಿಕೊಂಡ ಒಂದು ಜನಾಂಗದಲ್ಲಿ ಸಂಸ್ಕೃತಿ ದೊಡ್ಡದಾಗಿ ಬೆಳೆಯಲಾರದು ಎನ್ನುವುದು ಅವನ ಅಭಿಪ್ರಾಯ. ನಮ್ಮ ನಾಡಿನಲ್ಲಿ ಹಾಗಾಗದ ಹಾಗೆ ಸದಾ ಎಚ್ಚರವಾಗಿರಬೇಕಾದುದು ಅಗತ್ಯ. ಜನರಲ್ಲಿ ಆದರ್ಶಗಳನ್ನು ಬಿತ್ತಬೇಕಾದುದೂ ಅಗತ್ಯ. ಇಂತಹ ಮಹತ್ಕಾರ್ಯಕ್ಕೆ ಕಾಂತಾವರ ಕನ್ನಡ ಸಂಘ ತನ್ನ ಕಿಂಚಿತ್ ಕಾಣಿಕೆ ಸಲ್ಲಿಸುತ್ತಲೇ ಬಂದಿದೆ. ನಾಡಿಗೆ ನಮಸ್ಕಾರ ಪುಸ್ತಕ ಮಾಲೆ ಅಂತಹ ಒಂದು ಕಾಣಿಕೆ ಎನ್ನುತ್ತಾರೆ. ಬಿ.ಜನಾರ್ದನ ಭಟ್. ಜೊತೆಗೆ ಬದುಕಿನ ಸತ್ಯವನ್ನರಸಿದ ಕತೆಗಾರ ಬಾಗಲೋಡಿ ದೇವರಾಯ ಅವರ ಕುರಿತಾದ ಈ ಕೃತಿಯನ್ನು ಬರೆದುಕೊಟ್ಟು ಮಾಲೆಯ ಮಹತ್ವವನ್ನು ಹೆಚ್ಚಿಸಿದ ಪ್ರೊ.ಬಿ.ಸುರೇಂದ್ರ ರಾವ್ ಅವರಿಗೆ ಸಂಘವು ಋಣಿಯಾಗಿದೆ ಎಂದಿದ್ದಾರೆ.
ಲೇಖಕ ಬಿ. ಸುರೇಂದ್ರ ರಾವ್ ಅವರು ಇತಿಹಾಸ ಸಂಶೋಧಕರು ಹಾಘೂ ಪ್ರಾಧ್ಯಾಪಕರು. ಪುತ್ತೂರಿನ 1968ರಲ್ಲಿ ಸೆಂಟ್ ಫಿಲೋಮಿನಾ ಕಾಲೇಜಿನಲ್ಲಿ ಪದವೀಧರರು. 1970ರಲ್ಲಿ ಮೈಸೂರು ವಿಶ್ವವಿದ್ಯಾನಿಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. 1976ರಲ್ಲಿ ಪ್ರೊಫೆಸರ್ ಫೇಕ್ ಅಲಿಯವರ ಮಾರ್ಗದರ್ಶನದಲ್ಲಿ ಪಿಎಚ್.ಡಿ ಪೂರ್ಣಗೊಳಿಸಿದರು. ಮೈಸೂರಿನ ಮಾನಸಗಂಗೋತ್ರಿಯ ಜೂನಿಯರ್ ರಿಸರ್ಚ್ ಪೋಸ್ಟ್ ಗ್ರ್ಯಾಜುಯೇಚ್ ಡಿಪಾರ್ಟ್ಮೆಂಟ್ ನಲ್ಲಿ 1970-1972ರವರೆಗೆ ಜವಾಹರ ಲಾಲ್ ನೆಹರು ಯೋಜನೆಯ ಸಂಶೋಧನ ಸಹಾಯಕರಾಗಿ ಸೇವೆಸಲ್ಲಿಸಿದರು. ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ಇತಿಹಾಸ ವಿಭಾಗದ ಲೀಡರ್ ಆಗಿ 1982-1993ರವರೆಗೆ ಸೇವೆಸಲ್ಲಿಸಿ, ಆನಂತರ ಪ್ರಾಧ್ಯಾಪಕರಾಗಿ ಬಡ್ತಿ ಪಡೆದರು. ಇವರ ಮಾರ್ಗದರ್ಶನದಲ್ಲಿ 12 ಜನ ...
READ MORE