ವೈದ್ಯ ಸಾಹಿತಿ -ಲೇಖಕಿ ಎಚ್. ಗಿರಿಜಮ್ಮ ಅವರ ಕೃತಿ-ಬಂಜೆತನ ಮತ್ತು ಪರಿಹಾರೋಪಾಯಗಳು. ಬಂಜೆತನ ಎಂಬುದು ಮಹಿಳೆಯರಿಗೆ ಒಂದು ಕೆಟ್ಟ ಅವಸ್ಥೆ. ಬಂಜೆತನಕ್ಕೆ ಕೇವಲ ಮಹಿಳೆಯರನ್ನೇ ಹೊಣೆ ಮಾಡಲಾಗುತ್ತದೆ. ಆದರೆ, ಅದು ಪುರುಷನಿಂದಲೂ ಕಾರಣವಾಗಬಹುದು. ಆದರೆ, ಪುರುಷರ ‘ಅಹಂ’ ಮಧ್ಯೆ ಬಂದು ವೈದ್ಯಕೀಯ ಚಿಕಿತ್ಸೆಗೆ ಅವರು ತೆರೆದುಕೊಳ್ಳುವುದಿಲ್ಲ. ಹೀಗಾಗಿ, ಯಾವುದೇ ದೋಷ ಇರದಿದ್ದರೂ ಗೃಹಿಣಿ ಬಂಜೆ ಎಂಬ ಅಪವಾದ ಹೊರಬೇಕಾಗಿದೆ. ಇಂತಹ ಪೂರ್ವಗ್ರಹಗಳಿಂದ ಹೊರ ಬಂದು ಜಾಗೃತರಾಗುವ ಬಗ್ಗೆ ಈ ಕೃತಿಯಲ್ಲಿ ಮಾಹಿತಿ ಇದೆ. ವೈದ್ಯಕೀಯ ಚಿಕಿತ್ಸೆ ಹಾಗೂ ಪರಿಹಾರೋಪಾಯಗಳನ್ನೂ ಸೂಚಿಸಿರುವ ಕೃತಿ.
ಡಾ. ಎಚ್. ಗಿರಿಜಮ್ಮ- ಹುಟ್ಟಿದ್ದು ದಾವಣಗೆರೆ. ಪಿಯುಸಿವರೆಗೆ ಓದಿದ್ದು ಅಲ್ಲಿಯೇ. ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ವೈದ್ಯಕೀಯ ಶಿಕ್ಷಣ. ಯಶಸ್ವಿ ವೈದ್ಯಳಾಗಬೇಕು ಎನ್ನುವ ಅವರ ತಾಯಿಯ ಆಸೆ ಅವರನ್ನು ವೈದ್ಯಕೀಯ ಅಧ್ಯಯನದಲ್ಲಿ ತೊಡಗಿಕೊಳ್ಳುವಂತೆ ಮಾಡಿತು. ಚಿಕ್ಕ ವಯಸ್ಸಿನಲ್ಲಿ ಕಾದಂಬರಿಗಾರ್ತಿ ತ್ರಿವೇಣಿ ಬರಹದಿಂದ ಪ್ರಭಾವಿತರಾದವರು ಗಿರಿಜಮ್ಮ. ಅವರ ಮೊದಲ ಕತೆ ಹೂಬಳ್ಳಿಗೆ ಈ ಆಸರೆ ಸುಧಾ ವಾರಪತ್ರಿಕೆಯಲ್ಲಿ ಪ್ರಕಟವಾಯಿತು. ಚಂದಮಾಮ, ತಮಸೋಮ ಜ್ಯೋತಿರ್ಗಮಯ, ಅಂಬರತಾರೆ, ಸೇರಿದಂತೆ ಒಟ್ಟು 27 ಕಾದಂಬರಿಗಳು ಪ್ರಕಟವಾಗಿವೆ. ಅರ್ಧಾಂಗಿ, ಸಂಜೆಮಲ್ಲಿಗೆ, ಅನಾವರಣ, ಅನೇಕ ನೀಳ್ಗತೆಗಳು ಮಯೂರದಲ್ಲಿ ಪ್ರಕಟವಾಗಿವೆ. ಒಟ್ಟು 50 ಕತೆಗಳನ್ನು ಬರೆದಿದ್ದಾರೆ. ಐದು ಕಥಾಸಂಗ್ರಹಗಳು ...
READ MORE