‘ಬಸವಣ್ಣ ಮತ್ತು ಪ್ರಸ್ತುತ ಸಾಮಾಜಿಕ ಸಂದರ್ಭ’ ಲೇಖಕ ಡಾ. ಬಸವರಾಜ ಸಬರದ ಅವರ ಪ್ರಬಂಧ ಸಂಕಲನ. ದಿನಾಂಕ 23-03-1991ರಂದು ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟ ಕಾಲೇಜಿನಲ್ಲಿ ನಡೆದ ಪ್ರಚಾರೋಪನ್ಯಾಸದ ಸಂದರ್ಭದಲ್ಲಿ ಮಂಡಿಸಿದ ಪ್ರಬಂಧವಿದು ಎಂದಿದ್ದಾರೆ ಲೇಖಕ ಬಸವರಾಜ ಸಬರದ. ಜೊತೆಗೆ ಪ್ರಸ್ತುತ ಸಾಮಾಜಿಕ ಸಂದರ್ಭಕ್ಕೆ ಬಸವಣ್ಣನವರ ವಿಚಾರಗಳು ಅನಿವಾರ್ಯವಾಗಿವೆ. ಈ ನಿಟ್ಟಿನತ್ತ ಈ ಕಿರುಹೊತ್ತಿಗೆಯಲ್ಲಿ ವಿಶ್ಲೇಷಣೆಯ ಪ್ರಯತ್ನ ನಡೆದಿದೆ ಎಂದು ತಿಳಿಸಿದ್ದಾರೆ.
ಬಸವರಾಜ ಸಬರದ ಅವರು ಮೂಲತಃ ಕೊಪ್ಪಳ ಜಿಲ್ಲೆ ಯಲಬುರ್ಗ ತಾಲ್ಲೂಕಿನ ಕುಕನೂರಿನವರು. ಹುಟ್ಟಿದ್ದು 1954 ಜೂನ್ 20ರಂದು. ತಾಯಿ ಬಸಮ್ಮ, ತಂದೆ ಬಸಪ್ಪ ಸಬರದ. ಹುಟ್ಟೂರು ಕುಕನೂರಿನಲ್ಲಿಯೇ ಪ್ರಾಥಮಿಕ ಶಿಕ್ಷಣ ಪಡೆದ ಇವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್ಡಿ ಪದವಿ ಪಡೆದರು. ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದ ಇವರು ಹಲವಾರು ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಶೈಕ್ಷಣಿಕವಾಗಿ ಮಾತ್ರವಲ್ಲದೇ ದೇವದಾಸಿ ವಿಮೋಚನಾ ಹೋರಾಟ, ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ, ಅಸ್ಪೃಶ್ಯತಾ ನಿವಾರಣೆ, ದಲಿತ-ಬಂಡಾಯ ಚಳವಳಿ ಮುಂತಾದ ಸಾಮಾಜಿಕ ಹೋರಾಟಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ನನ್ನವರ ಹಾಡು, ಹೋರಾಟ, ...
READ MORE