ಹಂಪಿ ಇತಿಹಾಸ ಕುರಿತು ಹಲವು ಕುತೂಹಲಕಾರಿ ವಿಷಯಗಳನ್ನು ವಿವರಿಸುವ ಕೃತಿ; ಕುಮಾರ ಅಂಕನಹಳ್ಳಿಯವರ ’ಬಯಲಾದ ಹಂಪಿ’. ಈ ಕೃತಿಯು ಮುಖ್ಯವಾಗಿ ಶೈವ ಮತ್ತು ವೈಷ್ಣವರ ಘರ್ಷಣೆಯ ಫಲ. ಕನ್ನಡ -ತೆಲುಗಿನವರ ಘರ್ಷಣೆಯಿಂದಾಗಿ ಹಂಪಿ ನಾಶವಾಯಿತೆಂಬುದನ್ನು ಸ್ಪಷ್ಟವಾಗಿ ನಿರಾಕರಿಸುತ್ತದೆ. ರಾಜಕೀಯ ಹಾಗೂ ಧಾರ್ಮಿಕ ವೈರತ್ವವೇ ಹಂಪಿ ವಿನಾಶಕ್ಕೆ ಕಾರಣ ಎಂಬುದನ್ನು ವಿಶ್ಲೇಷಿಸುತ್ತದೆ.
ಲೇಖಕ ಕುಮಾರ್ ಅಂಕನಹಳ್ಳಿ ಅಭಿಪ್ರಾಯಪಟ್ಟು, "ಹಂಪಿ ಎನ್ನುವುದು ಒಂದು ಬೆರಗು, ಕೌತುಕ, ನಿಗೂಢ! ಶೈವ ಪರಂಪರೆಯ ಹಾಲುಮತದ ಹಕ್ಕ ಬುಕ್ಕರಿಂದ ಸ್ಥಾಪಿತ ವಿಜಯನಗರ ಸಾಮ್ರಾಜ್ಯದ ನಿಜ ಸಾಮ್ರಾಟ ಅಲ್ಲಿನ ಅಧಿದೇವತೆ- ವಿರೂಪಾಕ್ಷ. ತುಳುನಾಡಿನ ಸಾಳ್ವರು ಆಡಳಿತಕ್ಕೆ ಬರುವವರೆಗೆ ಬುಕ್ಕದೇವರಾಯ, ಪ್ರೌಢದೇವರಾಯರೆಲ್ಲ ವಿರುಪಾಕ್ಷನ ಹೆಸರಿನಲ್ಲಿ ರಾಜ್ಯಭಾರ ಮಾಡುತ್ತಿದ್ದರು. ತುಳುನಾಡಿನ ವೈಷ್ಣವ ಪಂಥದ ಸಾಳ್ವರು ವಿರುಪಾಕ್ಷನ ಹೆಸರನ್ನು ತೆಗೆದು ’ಶ್ರೀರಾಮ’ ಎಂಬ ಅಂಕಿತ ಬಳಸಿದರು. ತುಳುವ ನರಸನಾಯಕನ ಉಪಪತ್ನಿ, ತೆಲುಗು ಭಾಷೆಯ ನಾಗಲಾದೇವಿಯ ಮಗ ಕೃಷ್ಣದೇವರಾಯನನ್ನು ನರಸನಾಯಕನ ಮಂತ್ರಿಯಾಗಿದ್ದ ತೆಲುಗರ ತಿಮ್ಮರಸನು ಪಟ್ಟಕ್ಕೆ ತಂದನು. ಕೃಷ್ಣದೇವರಾಯನು ತನ್ನ ಆಸ್ಥಾನದಲ್ಲಿ ತೆಲುಗು ಪಂಡಿತರಿಗೆ ಸಾಕಷ್ಟು ಸ್ಥಾನಮಾನಗಳನ್ನು ನೀಡಿದ್ದಲ್ಲದೆ ವೈಷ್ಣವ ಗುಡಿಗಳನ್ನು ಕಟ್ಟಿಸಿದನು. ಈ ಎಲ್ಲ ಬೆಳವಣಿಗೆಯು ಮೂಲತಃ ಶೈವ ಸಾಮ್ರಾಜ್ಯವಾಗಿದ್ದನ್ನು ವೈಷ್ಣವವಾಗಿಸಿದ್ದು, ಸಹಜವಾಗಿ ಶೈವ-ವೈಷ್ಣವಲ್ಲದೆ ಕನ್ನಡ-ತೆಲುಗು ವೈರತ್ವಕ್ಕೆ ಕೂಡ ನಾಂದಿಯಾಯಿತು ಎಂದು ವಿಶ್ಲೇಷಿಸುತ್ತಾರೆ. ಹೀಗೆ ಹಂಪಿಯ ನಿಗೂಢ ಇತಿಹಾಸವನ್ನು ಬೆಳಕಿಗೆ ತರುವ ಪ್ರಯತ್ನ ಇಲ್ಲಿದೆ.
ಬರಹಗಾರ ಕುಮಾರ ಅಂಕನಹಳ್ಳಿ ಅವರು 1967 ಮೇ 12ರಂದು ಮೈಸೂರು ಜಿಲ್ಲೆ ಕೆ.ಆರ್. ನಗರ ತಾಲ್ಲೂಕಿನ ಅಂಕನಹಳ್ಳಿಯಲ್ಲಿ ಜನಿಸಿದರು. ತಾಯಿ ಲಕ್ಷ್ಮಮ್ಮ, ತಂದೆ ಗಂಗಾಧರ ಗೌಡ. ಎಸ್.ಎಸ್.ಎಲ್.ಸಿ ಶಿಕ್ಷಣವನ್ನು ಕೆ.ಆರ್. ನಗರದಲ್ಲಿ ಪಡೆದ ಇವರು ಸರ್ಕಾರಿ ಶಾಲಾ ಶಿಕ್ಷಕರಾಗಿ ವೃತ್ತಿ ಆರಂಭಿಸಿದರು. ನಂತರ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಪ್ರಸ್ತುತ ನಂಜನಗೂಡು ತಾಲ್ಲೂಕಿನ ಕೊಡಿಯಾಲದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಭಾಷಾ ಅಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಾಹಿತ್ಯ ಪ್ರಿಯರು ಆಗಿರುವ ಇವರು ಮಂಟೆಸ್ವಾಮಿ ಸಂಘರ್ಷ, ಕಪ್ಪಾಡಿ ರಾಜಪ್ಪಾಜಿ, ಹೆಗ್ಗಡದೇವನ ಕೋಟೆ ಜೇನು ಕುರುಬರು, ...
READ MORE