ಬುದ್ಧಿವಂತ ಬೀರ್ಬಲ್, ಆಗಾಗ ಗೊತ್ತಿಲ್ಲದೇ ಒದಗಿ ಬರುವ ಕಷ್ಟಗಳನ್ನು ನಿಮಿಷಗಳಲ್ಲೇ ಪರಿಹಾರವಾಗುವಂತೆ ಸಲಹೆ ಕೊಟ್ಟು ಸಮಸ್ಯೆಯನ್ನು ಪರಿಹರಿಸುವ ಚಾಣಾಕ್ಷತೆಯನ್ನು ಈ ಎಲ್ಲ ಕಥೆಗಳಲ್ಲೂ ಕಾಣಬಹುದು. ಇವನ್ನು ಮಕ್ಕಳ ಸಾಹಿತಿ ದು.ನಿಂ. ಬೆಳಗಲಿ ಅವರು ಸಂಪಾದಿಸಿದ್ದಾರೆ.
ಕಾದಂಬರಿಕಾರ ದು.ನಿಂ. ಬೆಳಗಲಿಯವರು (ಪೂರ್ಣ ಹೆಸರು: ದುರದುಂಡೇಶ್ವರ ನಿಂಗಪ್ಪ ಬೆಳಗಲಿ, ಜನನ: 30-03-1931) ಹುಟ್ಟಿದ್ದು ಬನಹಟ್ಟಿಯಲ್ಲಿ. ತಂದೆ ನಿಂಗಪ್ಪ. ತಾಯಿ ಚೆನ್ನಮ್ಮ, ಅಥಣಿ ತಾಲ್ಲೂಕಿನ ಐನಾಪುರ ಇವರ ಮೂಲ. ಬನಹಟ್ಟಿಯಲ್ಲಿ ನೆಲೆಸಿದ್ದರು. ಒಣಬಾಳೇ ದಿಂಡು ಸುಟ್ಟು ಕರೇ ಬಣ್ಣ ತಯಾರಿಸುತ್ತಿದ್ದು, ಬಾಳೇ ಬೂದಿ ಮನೆತನವೆಂದದ್ದು ಬೆಳಗಲಿ ಎಂಬ ಅಡ್ಡ ಹೆಸರಾಯಿತು. ತಾಯಿ ಜಾನಪದ ಕಥೆಗಳ ಹಾಡುಗಾರ್ತಿ. ಎಸ್.ಎಸ್.ಎಲ್.ಸಿ. ಪಾಸ್ ಮಾಡಿದ ಶಾಲೆಯಲ್ಲಿ (1951-55) ಶಿಕ್ಷಕರಾದರು. ಬೆನ್ನ ಹಿಂದಿನ ಕಣ್ಣು ಪ್ರಥಮ ಕಥಾಸಂಕಲನ(1957) ಪ್ರಕಟ, ಬೆಟಗೇರಿ ಕೃಷ್ಣಶರ್ಮರ ಜಯಂತಿ ಪತ್ರಿಕೆಗೆ ಹಾಗೂ ಪ್ರಪಂಚ, ಜೀವನ ಪತ್ರಿಕೆಗಳಿಗೆ ಬರೆದರು. 1960 ರಲ್ಲಿ ಮೊದಲ ಕಾದಂಬರಿ ಮುಳ್ಳು ...
READ MORE