ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಅವರ ಕೃತಿ-ಭಾರತೀಯ ಕಾವ್ಯಶಾಸ್ತ್ರ ಪರಿಭಾಷೆ. ಸಂಸ್ಕೃತ ಕಾವ್ಯಾಲಂಕಾರ ಗ್ರಂಥಗಳ ಸೂಚಿ, ಅನುವಾದಿತ ಸಂಸ್ಕೃತ ಕಾವ್ಯಾಲಂಕಾರ ಗ್ರಂಥಗಳ ಸೂಚಿ, ಕನ್ನಡ ಕಾವ್ಯಾಲಂಕಾರ ಗ್ರಂಥಗಳ ಸೂಚಿ, ಸ್ವತಂತ್ರ ಕಾವ್ಯಚಿಂತನೆ ಗ್ರಂಥಗಳ ಸೂಚಿ ಹಾಗೂ ಕಾವ್ಯಶಾಸ್ತ್ರ ಲೇಖನ ಸೂಚಿ ಅಧ್ಯಾಯಗಳು ಸವಿವರವಾಗಿ ಚರ್ಚಿತವಾಗಿವೆ. 1917ರಲ್ಲಿ ಪ್ರಕಟಿತ ಲೇಖನದೊಂದಿಗೆ ಈವರೆಗಿನ ಲೇಖನಗಳನ್ನು ಇಲ್ಲಿ ಕಾಣಿಸಲಾಗಿದೆ. ಕಾವ್ಯ, ಅಲಂಕಾರಗಳ ಶಾಸ್ತ್ರೀಯ ಅಧ್ಯಯನಕ್ಕೆ ಈ ಕೃತಿಯು ಉತ್ತಮ ಆಕರ ಗ್ರಂಥವಾಗಿದೆ.
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಮೊದಲ ಕುಲಪತಿಗಳಾಗಿದ್ದ ಮಲ್ಲೇಪುರಂ ಜಿ. ವೆಂಕಟೇಶ ಅವರು 1952, ಜೂನ್ 5ರಂದು ಬೆಂಗಳೂರು ಜಿಲ್ಲೆಯ ನೆಲಮಂಗಲದಲ್ಲಿ ಜನಿಸಿದರು. ತಂದೆ ಗಂಗಯ್ಯ, ತಾಯಿ ವೆಂಕಟಮ್ಮ. ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾಭ್ಯಾಸ ನೆಲಮಂಗಲದ ಸರ್ಕಾರಿ ಮತ್ತು ಹೈಯರ್ಸೆಕೆಂಡರಿ ಶಾಲೆ. ಮೊದಲ ಸಂಸ್ಕೃತ-ಕನ್ನಡ ಗುರುಗಳು ಎಸ್.ವಿ. ರಾಮಸ್ವಾಮಿ ಅಯ್ಯಂಗಾರ್. ಸಿದ್ಧಗಂಗಾ ಮಠದಲ್ಲಿ ಕನ್ನಡ ಪಂಡಿತ್ ಮತ್ತು ಸಂಸ್ಕೃತ ಅಲಂಕಾರವಿದ್ವತ್ ವ್ಯಾಸಂಗ. ವಿದ್ವಾನ್ ಬಿ. ವೆಂಕಟರಾಮಭಟ್ಟ, ಇವರಲ್ಲಿ ಕಾವ್ಯಾಲಂಕಾರಗಳ ಅಧ್ಯಯನ. ಬೆಂಗಳೂರಿನ ಶ್ರೀರಾಮಕೃಷ್ಣಾಶ್ರಮದಲ್ಲಿ ಸ್ವಾಮಿ ಆದಿದೇವಾನಂದರಿAದ ಅದ್ವೈತ ವೇದಾಂತದ ಅನುಗ್ರಹ. ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಎಂ.ಎ., ಮೂರನೇ ರ್ಯಾಂಕಿನೊಡನೆ ಕುವೆಂಪು ಚಿನ್ನದ ...
READ MORE