ಹಿರಿಯ ಲೇಖಕ ಜಿ. ಬಾಲಚಂದ್ರನ್ ಅವರು ಮಲಯಾಳ ಭಾಷೆಯಲ್ಲಿ ಬರೆದ ಕಾದಂಬರಿ ‘ಬಿಡುಗಡೆ’ಯನ್ನು ಹಿರಿಯ ಲೇಖಕ ಕೆ.ಕೆ. ನಾಯರ್ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಕಥಾವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ/
ಭಾಷಾಂತರಕ್ಕಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿದ್ದ ಲೇಖಕ ಕೆ. ಕೆ. ನಾಯರ್. ಕೆ. ಕೆ. ನಾಯರ್ ಅವರು ಜನಿಸಿದ್ದು ಉತ್ತರ ಕೇರಳದ ಪುಟ್ಟ ಗ್ರಾಮ ಅರತ್ತಿಲ್ನಲ್ಲಿ. ಬಡತನದ ಕಾರಣದಿಂದ ಬಾಲ್ಯದಲ್ಲಿಯೇ ಮಣಿಪಾಲಕ್ಕೆ ವಲಸೆ ಬಂದರು. ಮಲಯಾಳಂನಿಂದ ಕನ್ನಡಕ್ಕೆ 16 ಕಾದಂಬರಿ, 7 ಕಾವ್ಯ, 5 ಸಣ್ಣ ಕಥೆಗಳ ಸಂಗ್ರಹ ಅನುವಾದಿಸಿದ್ದಾರೆ. ಅವರು ’ಒಂದು ಆತ್ಮ ಕಥನ’ (ಕುಂಞಪ್ಪ) ಮಾತ್ರ ಕನ್ನಡದಲ್ಲಿ ರಚಿಸಿದ್ದಾರೆ. ಕನ್ನಡದಿಂದ ಮಲಯಾಳಕ್ಕೆ ಐದು ಕಾದಂಬರಿ ಅನುವಾದಿಸಿರುವ ಅವರು ತಗಳಿ ಶಿವಶಂಕರ ಪಿಳ್ಳೈ ಅವರ ಮಲಯಾಳ ಕೃತಿ ‘ಕಯರ್ ’ಅನ್ನು ’ಹಗ್ಗ’ ಎಂದು ಭಾಷಾಂತರಿಸಿದ್ದರು. ಅದಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಭಾಷಾಂತರ ಪ್ರಶಸ್ತಿ ...
READ MORE