ಪತ್ರಕರ್ತ ರವಿ ಬೆಳೆಗೆರೆ ಅವರ ಕೃತಿ-ಬಾಟಮ್ ಐಟಮ್-ಭಾಗ-7. ತಮ್ಮ` ಹಾಯ್ ಬೆಂಗಳೂರು 'ವಾರಪತ್ರಿಕೆಯಲ್ಲಿ ಬರೆದ ಪ್ರತಿ ವಾರದ ಅಂಕಣ ಬರೆಹಗಳು ಕೃತಿಯಲ್ಲಿ ಒಳಗೊಂಡಿವೆ. ಸಾಮಾಜಿಕ-ರಾಜಕೀಯ-ಶೈಕ್ಷಣಿಕ ಹೀಗೆ ವಿವಿಧ ವಲಯದ ವಿದ್ಯಮಾನಗಳಿಗೆ ಪ್ರತಿಕ್ರಿಯಿಸಿರುವ ಇಲ್ಲಿಯ ಬರೆಹಗಳು ತಮ್ಮ ನೇರ ಪ್ರತಿಪಾದನೆ ದೃಷ್ಟಿಯಿಂದ ಓದುಗರ ಗಮನ ಸೆಳೆಯುತ್ತವೆ.
ಕನ್ನಡದ ಪ್ರಮುಖ ಪತ್ರಕರ್ತರಲ್ಲಿ ಒಬ್ಬರಾದ ರವಿ ಬೆಳಗೆರೆ ಅವರು 15 ಮಾರ್ಚ್ 1958 ಬಳ್ಳಾರಿಯಲ್ಲಿ ಜನಿಸಿದರು. ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದಲ್ಲಿ ಎಂ.ಎ., ಮಾಡಿದ್ದ ಇವರು ಮೊದಲು ಪ್ರಧ್ಯಾಪಕರಾಗಿ ವೃತ್ತಿಜೀವನ ಆರಂಭಿಸಿದರು. ನಂತರ ಸಂಯುಕ್ತ ಕರ್ನಾಟಕ, ಕರ್ಮವೀರ ಪತ್ರಿಕೆಗಳಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿದರು. ಲಂಕೇಶ್ ಪತ್ರಿಕೆಯಲ್ಲಿ ನಿಯಮಿತವಾಗಿ ಬರೆಯುತ್ತಿದ್ದ ಅವರು ಆಮೇಲೆ ತಾವೇ ಸ್ವತಃ ಹಾಯ್ ಬೆಂಗಳೂರು ಪತ್ರಿಕೆಯನ್ನು ಆರಂಭಿಸಿದರು. ಹಾಯ್ ಬೆಂಗಳೂರ್ ವಾರಪತ್ರಿಕೆಯು ಓದುಗರ ಮನಗೆದ್ದು ಕನ್ನಡ ಪತ್ರಿಕೋದ್ಯಮದಲ್ಲಿ ಹೊಸ ಸಂಚಲನ ಮೂಡಿಸಿತು. ಹಾಯ್ ಬೆಂಗಳೂರು ಪತ್ರಿಕೆಯ ಜೊತೆಗೆ ಓ ಮನಸೇ ಪಾಕ್ಷಿಕ ಪ್ರಾರಂಭಿಸಿದರು. ಶಿವರಾಮ ಕಾರಂತ ...
READ MORE