ಒಬ್ಬೊಬ್ಬರಿಗೆ ಒಂದೊಂದು ಬುದ್ಧಿಶಕ್ತಿಯ ಮಟ್ಟ ಇದೆಯೆಂಬ ನಂಬಿಕೆ ನಮ್ಮದು. ಆದರೆ ಅದನ್ನು ಹಲವಾರು ದೃಷ್ಟಿಕೋನದಲ್ಲಿ ಗ್ರಹಿಸಿ ವ್ಯಾಖ್ಯಾನಿಸಿದ್ದಾರೆ ಮನೋವಿಜ್ಞಾನಿಗಳು. ಆ ‘ಬುದ್ಧಿಶಕ್ತಿ’ಯನ್ನು ಮನೋವಿಜ್ಞಾನಿಗಳು ತಮ್ಮ ದೃಷ್ಟಿಕೋನದಲ್ಲಿ ಅರಿಯಲು ಮಾಡಿದ ಪ್ರಯತ್ನಗಳು ಹಾಗೂ ವ್ಯಾಖ್ಯಾನಿಸಿದ ರೀತಿಯನ್ನು ಈ ಕೃತಿಯಲ್ಲಿ ಲೇಖಕ ಮಹಾಬಲೇಶ್ವರ ರಾವ್ ವಿವರಿಸಿದ್ದಾರೆ.
ಮಹಾಬಲೇಶ್ವರ ರಾವ್ ಅವರು 1952ರಲ್ಲಿ ಉಡುಪಿ ಜಿಲ್ಲೆಯ ಮಣೂರಿನಲ್ಲಿ ಜನಿಸಿದರು. ಎಂ.ಎ., ಎಂ.ಎಡ್ ಮತ್ತು ಪಿಎಚ್.ಡಿ. ಪದವೀಧರರಾದ ಅವರು ಆರು ವರ್ಷ ಪ್ರೌಢಶಾಲಾ ಕನ್ನಡ ಶಿಕ್ಷಕರಾಗಿ, ಮೂರು ವರ್ಷ ಆಕಾಶವಾಣಿಯ ಭದ್ರಾವತಿ ಹಾಗೂ ಮಂಗಳೂರು ಕೇಂದ್ರಗಳಲ್ಲಿ ಪ್ರಸಾರಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಮಹಾಬಲೇಶ್ವರ ರಾವ್ ಕಳೆದ ನಾಲ್ಕು ದಶಕಗಳಿಂದ ಕನ್ನಡ ಭಾಷಾ ಬೋಧನೆ, ಬರವಣಿಗೆ, ಭಾಷಣ, ಸಾಹಿತ್ಯ ಮೊದಲಾದ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಲೇಖಕರಾಗಿ, ಅನುವಾದಕರಾಗಿ, ಅಂಕಣಕಾರರಾಗಿ ತಮ್ಮದೇ ಛಾಪು ಮೂಡಿಸಿರುವ ಅವರು 14ವರ್ಷ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದ್ದಾರೆ. ’ಉದಯವಾಣಿ’, ’ಪ್ರಜಾವಾಣಿ’, ’ತರಂಗ’, ’ಹೊಸತು’ ಮೊದಲಾದ ಕನಡ ದಿನಪತ್ರಿಕೆ, ಮ್ಯಾಗಸೈನ್ಗಳಲ್ಲಿ ಅವರ ನೂರಾರು ಲೇಖನಗಳನ್ನು ಪ್ರಕಟಣೆ ಕಂಡಿವೆ. ...
READ MORE