"ಚಿತ್ರದುರ್ಗ ಜಿಲ್ಲೆಯಲ್ಲಿ ಬುಕಾನನ್" ಇದು ಎಂ.ಜಿ. ರಂಗಸ್ವಾಮಿಯ ಕಥಾ ಸಂಕಲನ . ಫ್ರಾನ್ಸಿಸ್ ಬುಕ್ಯಾನನ್ ಈಸ್ಟ್ ಇಂಡಿಯಾ ಕಂಪನಿಯ ಬಂಗಾಳ ಪ್ರಾಂತ್ಯದಲ್ಲಿ ವೈದ್ಯಾಧಿಕಾರಿಯಾಗಿದ್ದವನು. ಬ್ರಿಟಿಷರು ತಮ್ಮ ಅಧೀನದಲ್ಲಿದ್ದ ಮದ್ರಾಸ್, ಮೈಸೂರು, ಕೆನರಾ ಮತ್ತು ಮಲಬಾರ್ ರಾಜ್ಯಗಳಲ್ಲಿನ ಕೃಷಿ, ಕಲೆ, ವಾಣಿಜ್ಯ, ಆರ್ಥಿಕ-ಧಾರ್ಮಿಕ ಸ್ಥಿತಿ-ಗತಿಗಳು ಹಾಗೂ ಅಲ್ಲಿಯ ಜನ ಸಮುದಾಯಗಳು, ಬುಡಕಟ್ಟುಗಳು, ಅವರ ಜೀವನ ವಿಧಾನ ಮತ್ತು ಆಚರಣೆ-ಸಂಪ್ರದಾಯಗಳನ್ನಲ್ಲದೆ ಸ್ಥಳೀಯ ಇತಿಹಾಸ ಕುರಿತು ಅಧ್ಯಯನಾತ್ಮಕ ವರದಿ ಮಾಡಲು ಅವನನ್ನು ಕ್ರಿ.ಶ.1800ರಲ್ಲಿ ನಿಯೋಜಿಸಿದರು. ಅವನ ಈ ಪ್ರವಾಸಕ್ಕೆ ತೆಗೆದುಕೊಂಡ ಅವಧಿ ಒಂದೂಕಾಲು ವರ್ಷ. ಅವನ ಈ ಮಹಾ ಪಯಣದಲ್ಲಿ ಕಂಡುಂಡ ಅನುಭವ ಕಥನ 2000ಕ್ಕೂ ಹೆಚ್ಚು ಪುಟಗಳಷ್ಟು ವಿಸ್ತಾರವಾಗಿದ್ದು ಅದನ್ನು ಮೂರು ಸಂಪುಟಗಳಲ್ಲಿ ಪ್ರಕಟಿಸಿದ್ದಾನೆ. ಇದೊಂದು ಸಾಂಸ್ಕೃತಿಕ ದಾಖಲೆ. ಇನ್ನೂರು ವರ್ಷದ ಕೆಳಗಿನ ಪ್ರಾಂತ್ಯಗಳ ಬದುಕಿನೊಳಗೊಂದು ಇಣುಕು ನೋಟದಂತಿರುವ ಈ ಅಧ್ಯಯನ ಪ್ರವಾಸ ಕಥನ ಕಳ್ಳಕಾಕರ, ಹುಲಿಯಂಥ ಕಾಡು ಪ್ರಾಣಿಗಳ ಪರಿಸರದಲ್ಲಿ ಸಂಚರಿಸಿ ವರದಿ ಮಾಡುವ ರೋಚಕ ಯಾತ್ರೆಯೂ ಆಗಿದೆ.ಇಂಥದೊಂದು ಅಮೂಲ್ಯ ಕೃತಿಯನ್ನು ಇಂಗ್ಲಿಷ್ ನಿಂದ ಕನ್ನಡಕ್ಕೆ ಎಂ.ಜಿ. ರಂಗಸ್ವಾಮಿ ಅನುವಾದಿಸಿದ್ದಾರೆ.
ಎಂ.ಜಿ. ರಂಗಸ್ವಾಮಿ ಅವರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕು ಮಲ್ಲಪ್ಪನಹಳ್ಳಿ ಗ್ರಾಮದಲ್ಲಿ 25 ,03,1962 ರಂದು ಜನಿಸಿದರು. ತಂದೆ ಆರ್. ಗುಡುವಯ್ಯ, ತಾಯಿ ಎಂ.ರಂಗಮ್ಮ. ಸ್ವಗ್ರಾಮ ಹಾಗೂ ಚಿತ್ರದುರ್ಗದಲ್ಲಿ ಪ್ರಾಥಮಿಕ ಶಿಕ್ಷಣ, ಪ್ರೌಢ ಶಿಕ್ಷಣವನ್ನು ಪೂರೈಸಿ, ಮೈಸೂರು ಯುವರಾಜ ಕಾಲೇಜಿನಲ್ಲಿ ಬಿ.ಎಸ್ಸಿ, ಪದವಿ, ಮಾನಸ ಗಂಗೋತ್ರಿಯಲ್ಲಿ ಡಿಪ್ಲೋಮಾ-ಇನ್-ಇಂಗ್ಲಿಷ್ ಹಾಗೂ ಆಂಗ್ಲ ಸಾಹಿತ್ಯದಲ್ಲಿ ಎಂ.ಎ. ಪದವಿಯನ್ನು ಪಡೆದರು. ಮೂವತ್ತೈದು ವರ್ಷಗಳ ಕಾಲ ಹಿರಿಯೂರು ತಾಲ್ಲೂಕು ಧರ್ಮಪುರ ಗ್ರಾಮದ ಶ್ರೀಪಂಚಲಿಂಗೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಆಂಗ್ಲಭಾಷಾ ಉಪನ್ಯಾಸಕರಾಗಿ ನಂತರ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿ ಮಾರ್ಚ್ 31, 2022 ರಂದು ನಿವೃತ್ತರಾಗಿದ್ದಾರೆ. ಇವರ ...
READ MORE