ಖ್ಯಾತ ವಿಚಾರವಾದಿ ಅಬ್ರಾಹಂ ಟಿ. ಕೋವೂರ್ ಅವರು ವೈಜ್ಞಾನಿಕ ಸತ್ಯಗಳನ್ನಷ್ಟೆ ನಂಬಿ ಎಂದು ತಮ್ಮ ಜೀವನದುದ್ದಕ್ಕೂ ಪ್ರತಿಪಾದಿಸುತ್ತಾ ಬಂದವರು. ಮೌಢ್ಯಗಳನ್ನು ತಿರಸ್ಕರಿಸಿದ್ದು ಮಾತ್ರವಲ್ಲ; ಕಟುವಾಗೇ ಟೀಕಿಸುತ್ತಿದ್ದವರು. ಧಾರ್ಮಿಕತೆಯ ಹೆಸರಿನಲ್ಲಿ ನಡೆಯುವ ಎಲ್ಲ ಶೋಷಣೆಗಳನ್ನು ಖಂಡಿಸಿದವರು. ಇಂತರಹ ಮಹನೀಯರು ಕಂಡ ವೈಜ್ಞಾನಿಕ ಸತ್ಯಗಳ ಕುರಿತು ಬರೆದ ಲೇಖನಗಳ ಕನ್ನಡಾನುವಾದವೇ ಈ ಕೃತಿ-ಕೋವೂರ್ ಕಂಡ ವೈಜ್ಞಾನಿಕ ಸತ್ಯ. ವಿಚಾರವಾದಿ ಕೆ. ಮಾಯಿಗೌಡ ಅವರು ಕೃತಿಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.
ಕೆ. ಮಾಯಿಗೌಡ ಅವರು ಮಂಡ್ಯ ಜಿಲ್ಲೆಯ ನವಿಲುಮಾರನಹಳ್ಳಿಯವರು. ನಿವೃತ್ತ ಮುಖ್ಯೋಪಾಧ್ಯಯರು ರಾಷ್ಟ್ರಕವಿ ಕುವೆಂಪು ಅವರೊಂದಿಗೆ ಒಡನಾಟ. ಸ್ವಾತಂತ್ಯ್ರಯೋಧ ಕನಕಪುರದ ಕರಿಯಪ್ಪನವರು, ಅಂಬೇಡ್ಕರ್, ಕೋವೂರ್, ಬಸವ, ಮಾರ್ಕ್ಸ್ , ಪೆರಿಯಾರ್ ಚಿಂತನೆಗಳಿಂದ ಪ್ರೇರಣೆ. ಸ್ಥಳೀಯ ಪತ್ರಿಕೆಯಲ್ಲೂ ಕೆಲಸ ಮಾಡಿದರು. ಮಾಜಿ ಸಚಿವ ಬಿ. ಬಸಲಿಂಗಪ್ಪ ಅವರ ಒಡನಾಟದಿಂದ (1978) ಪಾಂಡವಪುರ ವಿಧಾನಸಭಾ ಕ್ಷೇತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಸೋತರು. ನಂತರ, ದೇವರಾಜ ಅರಸು ಅವರೊಂದಿಗೆ ಇದ್ದ ಆತ್ಮೀಯ ಒಡನಾಟವು ಇತ್ತು. ಕೋವೂರು ಕಂಡ ವೈಜ್ಞಾನಿಕ ಸತ್ಯ-ಇವರ ಅನುವಾದಿತ ಕೃತಿ. ...
READ MORE