ಡಿವಿಜಿಯವರ ಬರಹಗಳಲ್ಲಿ ಅತ್ಯುತ್ತಮವಾದ ಕೆಲವನ್ನು ಲೇಖಕ ಶತಾವಧಾನಿ ಆರ್. ಗಣೇಶ ಅವರು ಸಂಕಲಿಸಿದ್ದಾರೆ. ಡಿವಿಜಿಯವರ ಒಟ್ಟು ಬರವಣಿಗೆ 10-11ಸಾವಿರ ಪುಟಗಳಷ್ಟಾದೀತು. ಇದನ್ನೆಲ್ಲ 300-350 ಪುಟಗಳಲ್ಲಿ ಸಂಗ್ರಹಿಸಿದ್ದು ಸಾಹಸವೇ. ಇಂಥ ವಾಚಿಕೆಗಳಿಂದ ಹೆಚ್ಚಿನ ಓದುಗರಿಗೆ ಅನುಕೂಲವಾಗುತ್ತದೆ ಎಂಬ ಆಶಯದಿಂದ ಈ ಕೃತಿಯನ್ನು ಪ್ರಕಟಿಸಿದ್ದಾಗಿ ಸಂಪಾದಕರು ತಿಳಿಸಿದ್ದಾರೆ.
ಶತಾವಧಾನಿ ಗಣೇಶ ಅವರು ಉತ್ತಮ ವಾಗ್ಮಿಗಳು. ವಿದ್ವಾಂಸರು. ಅವಧಾನ ಕಲೆಯನ್ನು ರೂಢಿಸಿಕೊಂಡವರು. “ಕನ್ನಡದಲ್ಲಿ ಅವಧಾನ ಕಲೆ” ಎಂಬ ಮಹಾಪ್ರಬಂಧಕ್ಕೆ ಹಂಪಿಯ ಕನ್ನಡ ವಿಶ್ವವಿದ್ಯಾನಿಲಯ ಪ್ರಪ್ರಥಮ ಡಿ.ಲಿಟ್. ಪದವಿ ನೀಡಿ ಗೌರವಿಸಿದೆ. ಪ್ರಸ್ತುತ ಭಾರತೀಯ ವಿದ್ಯಾಭವನದ ಬೆಂಗಳೂರು ಶಾಖೆಯ ಸಂಸ್ಕೃತ ವಿಭಾಗದ ನಿರ್ದೇಶಕರಾಗಿದ್ದಾರೆ. ಆರ್.ಶಂಕರನಾರಾಯಣ ಅಯ್ಯರ್ ಹಾಗೂ ಅಲಮೇಲಮ್ಮ ದಂಪತಿಯ ಪುತ್ರರು.04-12-1962ರಂದು ಕೋಲಾರದಲ್ಲಿ ಜನನ. ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ (UVCE), ದಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವೀಧರರು. ಬೆಂಗಳೂರಿನ ಇಂಡಿಯನ್ ಇನ್ಸ್ಟಿ ಟ್ಯೂಟ್ ಆಫ್ ಸೈನ್ಸ್ ನಲ್ಲಿ ಮೆಟೀರಿಯಲ್ ಸೈನ್ಸ್ ಹಾಗೂ ಮೆಟಲರ್ಜಿಯಲ್ಲಿ ಎಂ.ಎಸ್ಸಿ. ಪದವೀಧರರು. ಮೈಸೂರ್ ವಿಶ್ವವಿದ್ಯಾಲಯದ ಅಡಿಯಲ್ಲಿ ...
READ MORE