ನಮ್ಮ ಮಾನಸಿಕ ಆರೋಗ್ಯದಷ್ಟೇ ದೈಹಿಕ ಆರೋಗ್ಯವು ಮುಖ್ಯವಾಗುತ್ತದೆ. ಅದರ ಸ್ವಚ್ಛತೆಯನ್ನು ಸಾಧಿಸಲು ಹಲವು ಕ್ರಮಗಳನ್ನು ಈ ಕೃತಿ ಚರ್ಚಿಸುತ್ತದೆ. ಮನುಷ್ಯನ ದೀರ್ಘಕಾಲದ ಅನುಭವ ಮತ್ತು ಅರಿವಿನಿಂದ ಬಂದ ಸಂಗತಿಗಳನ್ನು ಇಲ್ಲಿ ನೀಡಲಾಗಿದ್ದು ಸ್ವಚ್ಛತಾ ಕ್ರಮಗಳು ಹೇಗೆ ಮನುಷ್ಯನ ದೈಹಿಕ ಮತ್ತು ಮಾನಸಿಕ ತೃಪ್ತಿಯನ್ನು ಹೆಚ್ಚಿಸುವುದರಲ್ಲೂ ಪಾತ್ರವಹಿಸುತ್ತವೆ ಎಂಬುದನ್ನು ಕನ್ನಡದ ಎಳೆಯರಿಗಾಗಿ ಲೇಖಕ ಡಾ. ನಾ. ಸೋಮೇಶ್ವರ ಈ ಕೃತಿಯಲ್ಲಿ ಸಮಗ್ರವಾಗಿ ವಿವರಿಸಿದ್ದಾರೆ.
ನಾ. ಸೋಮೇಶ್ವರ ಮೇ 14 1955 ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ತಂದೆ ನಾರಪ್ಪ ಹಾಗೂ ತಾಯಿ ಅಂಜನಾ. ವಿದ್ಯಾರ್ಥಿಯಾಗಿದ್ದಾಗಲೇ 'ಜೀವನಂದಿ' ಎಂಬ ಮಾಸಿಕ ಪತ್ರಿಕೆಯನ್ನು ಪ್ರಕಟಿಸಿದ್ದರು. ತಮ್ಮ ಬಿ.ಎಸ್.ಸಿ ಪದವಿಯ ಬಳಿಕ, ಎಮ್.ಬಿ.ಬಿ.ಎಸ್ ಪದವಿಯನ್ನು ಗಳಿಸಿದರು. ವೃತ್ತಿಯಿಂದ ವೈದ್ಯರಾದ ಸೋಮೇಶ್ವರರು ಒಂದು ಫಾರ್ಮಸ್ಯೂಟಿಕಲ್ ಕಂಪೆನಿಗೆಸಲಹೆಗಾರರಾಗಿ ಕಾರ್ಯನಿರ್ವಹಿಸಿದರು. ಡಾ. ಸೋಮೆಶ್ವರ ಚಂದನ ಟೆಲಿವಿಷನ್ ವಾಹಿನಿಯಲ್ಲಿ ’ಥಟ್ ಅಂತ ಹೇಳಿ’ ಎನ್ನುವ ಕನ್ನಡ ಕ್ವಿಜ್ ಕಾರ್ಯಕ್ರಮದ ರೂವಾರಿಯಾಗಿ ಪ್ರಸಿದ್ಧರಾದವರು. ವೃತ್ತಿಯಿಂದ ವೈದ್ಯರಾಗಿ ಪ್ರವೃತ್ತಿಯಿಂದ ಲೇಖಕರಾಗಿ ಅನೇಕ ಪುಸ್ತಕಗಳನ್ನು ರಚಿಸಿದ್ದಾರೆ. ಅನಂತದೆಡೆಗೆ, ಓ ನನ್ನ ಚೇತನ, ದೈಹಿಕ ಸ್ವಚ್ಛತೆ, ತಲ್ಲಣಿಸದಿರು ಕಂಡ್ಯ ತಾಳು ಮನವೆ, ಅದೃಶ್ಯ ಲೋಕದ ಅಗೋಚರ ಜೀವಿಗಳು, ನಮ್ಮ ದಿನನಿತ್ಯದ ಆಹಾರ, ಹೀಗೆ ಮೂವತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. 2003 ರಲ್ಲಿ ವೈದ್ಯ ಸಾಹಿತ್ಯ ಪ್ರಶಸ್ತಿ, ಡಾಕ್ಟರ್ಸ್ ಡೇ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ...
READ MORE