ಲೇಖಕ ಸದಾಶಿವ ದೊಡಮನಿ ಪಿಎಚ್. ಡಿ. ಸಂಶೋಧನಾ ಮಹಾಪ್ರಬಂಧ ಧಾರವಾಡ ಮತ್ತು ಹಲಸಂಗಿ ಗೆಳೆಯರ ಗುಂಪು: ಒಂದು ಸಾಂಸ್ಕೃತಿಕ ಅಧ್ಯಯನ. ಇದರಲ್ಲಿ ನವೋದಯ ಕಾಲ ಘಟ್ಟದಲ್ಲಿ ರಾಷ್ಟ್ರೀಯತೆ ಹಾಗೂ ಕನ್ನಡ ನಾಡು, ನುಡಿಯ ಹಿನ್ನೆಲೆಯಲ್ಲಿ 'ಧಾರವಾಡ ಮತ್ತು ಹಲಸಂಗಿ ಗೆಳೆಯರ ಗುಂಪಿ'ನ ನಿರ್ಮಾತೃಗಳಾದ. ರಾ. ಬೇಂದ್ರೆ, ಶಂ. ಬಾ. ಜೋಶಿ, ಮಧುರಚೆನ್ನರಾದಿಯಾಗಿ ಅವರ ಶಿಷ್ಯ-ಗೆಳೆಯರ ಸಾಧನೆ, ಸಿದ್ಧಿಗಳನ್ನು ಇಲ್ಲಿ ಅಧ್ಯಯನಕ್ಕೊಳಪಡಿಸಲಾಗಿದೆ. ಜಾನಪದ ಹಾಗೂ ಶಿಷ್ಟ ಸಾಹಿತ್ಯದ ಹಿನ್ನೆಲೆಯಲ್ಲಿ ಗೆಳೆಯರು ಗೈದ ಕೃಷಿ, ಕಾರ್ಯ-ಚಟುವಟಿಕೆಗಳನ್ನು ಸಾಂಸ್ಕೃತಿಕ ನೆಲೆಯಲ್ಲಿ ವಿವೇಚಿಸಲಾಗಿದೆ. ಕೆ.ಎನ್ ಗಂಗಾನಾಯಕ್ ಅವರು ಕೃತಿಗೆ ಬೆನ್ನುಡಿಯ ಮಾತುಗಳನ್ನು ಬರೆದಿದ್ದಾರೆ.
ಸದಾಶಿವ ದೊಡಮನಿ ಮೂಲತಃ ಇಳಕಲ್ ನವರು. ಕಾವ್ಯ ಸಂಶೋಧನೆ, ವಿಮರ್ಶೆ ಹೀಗೆ ಹಲವು ಪ್ರಕಾರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹನಿಗವಿತೆಗಳನ್ನು ಬರೆಯುತ್ತಿದ್ದಾರೆ. ಪ್ರಸ್ತುತ ಇಳಕಲ್ ಕಾಲೇಜಿನಲ್ಲಿ ಕನ್ನಡ ಸಹಾಯಕ ಪ್ರಾಧ್ಯಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೃತಿಗಳು: ನೆರಳಿಗೂ ಮೈಲಿಗೆ, ಇರುವುದು ಒಂದೇ ರೊಟ್ಟಿ ...
READ MORE