ಲೇಖಕ ಸಂಗಮೇಶ ತಮ್ಮನಗೌಡ್ರ ಅವರು ಬರೆದ ಕೃತಿ-ದಿವ್ಯ ಪುರುಷರ ಭವ್ಯ ಬದುಕು. ಸಿರಸಂಗಿ ಲಿಂಗರಾಜರು, ಮೈಲಾರ ಮಹಾದೇವಪ್ಪ, ಗುರುನಾನಕರು, ಲಾಲ ಬಹಾದ್ದೂರ ಶಾಸ್ತ್ರಿ, ಮೊರಾರ್ಜಿ ದೇಸಾಯಿ, ಭಗತ್ ಸಿಂಗ್, ಮಹಾತ್ಮ ಗಾಂಧೀಜಿ, ಸಾಮ್ರಾಟ ಅಶೋಕ, ಬಸವಣ್ಣ ಹಾಗೂ ಗೌತಮ ಬುದ್ಧ ಹೀಗೆ ಒಟ್ಟು 11 ಮಹಾಪುರುಷರ ಜೀವನ ವೃತ್ತಾಂತವನ್ನು ಬರೆದು, ವಿಶೇಷವಾಗಿ ಮಕ್ಕಳೀಗೆ ಈ ಮಹಿನಿಯರನ್ನು ಅತ್ಯಂತ ಸರಳವಾಗಿ ಪರಿಚಯಿಸಿದ್ದಾರೆ.
ಸಂಗಮೇಶ ತಮ್ಮನಗೌಡ್ರ (ಎಸ್.ವಿ. ತಮ್ಮನಗೌಡ್ರ) ಮೂಲತಃ ಗದಗ ಜಿಲ್ಲೆಯ ಗುಜಮಾಗಡಿ ಗ್ರಾಮದವರು. (ಜನನ: 15-01-1970) ಸದ್ಯ, ರೋಣ ತಾಲೂಕಿನ ಬೂದಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರ ವಿ.ವಿ.ಯಿಂದ ಎಂ.ಎ, ಮಧುರೈ ಕಾಮರಾಜ ವಿವಿಯಿಂದ ಎಂ.ಫಿಲ್ ಹಾಗೂ ಮುಂಬೈ ವಿ.ವಿ.ಯಿಂದ ಪಿಎಚ್ ಡಿ (ವಿಷಯ: ಕನ್ನಡದಲ್ಲಿ ಏಕಾಂಕಗಳು: ಒಂದು ಅಧ್ಯಯನ-1975-95) ಪದವಿ ಪಡೆದರು. ದ.ರಾ. ಬೇಂದ್ರೆ ವೇದಿಕೆ ಸ್ಥಾಪಿಸಿ (2000) ನಿರಂತರವಾಗಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಕೃತಿಗಳು: ಹಂಸ, ಸ್ಫೂರ್ತಿ-ಕವನ ಸಂಕಲನಗಳು, ಮತ್ತೆ ಹುಟ್ಟಿತು ಕವನ-ಭಾವಗೀತೆಗಳ ಸಂಕಲನ, ಪಶ್ಚಾತ್ತಾಪ, ಕರುಳಿನ ಬೆಲೆ, ಖಳನಾಯಕನ ...
READ MORE