ಭಾರತ-ಚೀನಾ ದೇಶಗಳ ನಡುವಿನ ಗಡಿ ಬಿಕ್ಕಟ್ಟಿಗೆ ಕಾರಣವಾಗಿರುವ ’ದೋಕ್ಲಾಮ್’ ಕುರಿತಾದ ಬರೆಹಗಳೂ ಸೇರಿದಂತೆ ಪ್ರೇಮಶೇಖರ ಅವರು ಬರೆದ ಅಂಕಣ ಬರೆಹಗಳು ಈ ಸಂಕಲನದಲ್ಲಿವೆ. ವಿಜಯವಾಣಿ ದಿನಪತ್ರಿಕೆಗೆ 2017ರಲ್ಲಿ ಬರೆದ ಬರೆಹಗಳನ್ನು ಇಲ್ಲಿ ಸಂಕಲಿಸಲಾಗಿದೆ. ಅಂತರರಾಷ್ಟ್ರೀಯ ಬೆಳವಣಿಗೆಗಳಿಗೆ ಸಂಬಂಧಿಸಿದ ಹಾಗೂ ಸಮಕಾಲೀನ ವಿದ್ಯಮಾನಗಳ ಕುರಿತು ಬರೆದ ಬರೆಹಗಳಿವು. ’ಜಗದಗಲ’ ಎಂಬ ಅಂಕಣದಲ್ಲಿ ಪ್ರಕಟವಾದ ಲೇಖನಗಳ ಜೊತೆಯಲ್ಲಿ ಭಾನುವಾರದ ಪುರವಣಿ ’ವಿಜಯ ವಿಹಾರ’ಕ್ಕಾಗಿ ಬರೆದು ಪ್ರಕಟಿಸಿದ ಇಪ್ಪತ್ತೆರಡು ಲೇಖನಗಳನ್ನು ಈ ಸಂಗ್ರಹ ಒಳಗೊಂಡಿದೆ.
ಹೊರನಾಡ ಕನ್ನಡಿಗ ಪ್ರೇಮಶೇಖರ ಪಠ್ಯವಿಷಯಗಳ ಬಗ್ಗೆ ಇಂಗ್ಲೀಷಿನಲ್ಲಿ ಸಂಶೋಧನಾ ಲೇಖನಗಳನ್ನು ಹಾಗೂ ಕನ್ನಡದಲ್ಲಿ ಕಥೆಕಾದಂಬರಿಗಳನ್ನು ಬರೆಯುವುದರ ಮೂಲಕ ಬರವಣಿಗೆಯನ್ನಾರಂಭಿಸಿದವರು.. ಹುಟ್ಟಿದ್ದು 1960 ಜೂನ್ 22 ಕೊಳ್ಳೇಗಾಲದಲ್ಲಿ. ದೆಹಲಿಯಲ್ಲಿ ವಿದ್ಯಾಭ್ಯಾಸ ಮಾಡಿ, ಇಪ್ಪತ್ತೆರಡು ವರ್ಷಗಳ ಸುಧೀರ್ಘ ಕಾಲ ಪಾಂಡಿಚೆರಿ ವಿಶ್ವವಿದ್ಯಾಲಯದಲ್ಲಿ ಭಾರತದ ವಿದೇಶಾಂಗ ನೀತಿಯನ್ನು ಬೋಧಿಸಿ 2012ರಲ್ಲಿ ಸ್ವಯಂನಿವತಿ ಪಡೆದುಕೊಂಡಿದ್ದಾರೆ. ಪತ್ರಿಕಾರಂಗದಲ್ಲಿರುವ ಹಿತೈಷಿಗಳ ಬಯಕೆಯಂತೆ ಅಂತರರಾಷ್ಟ್ರೀಯ ಸಂಬಂಧಗಳ ಬಗ್ಗೆ ಕನ್ನಡದಲ್ಲಿ ಐನೂರರಷ್ಟು ಲೇಖನಗಳನ್ನು ಬರೆದಿದ್ದಾರೆ. ಇದುವರೆಗೆ ಎರಡು ಕಾದಂಬರಿಗಳನ್ನೂ, ಹತ್ತು ಕಥಾ ಸಂಕಲನಗಳನ್ನೂ, ಹನ್ನೊಂದು ಲೇಖನ ಸಂಕಲನಗಳನ್ನೂ ಪ್ರಕಟಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಾಹಿತ್ಯಾಸಕ್ತರಿಗೆ ಕಥಾರಚನೆಯಲ್ಲಿ ತರಬೇತಿ ನೀಡುವ ಕಾರ್ಯಾಗಾರಗಳನ್ನು ...
READ MORE