ದುಃಖವನ್ನು ಭರಿಸಿ, ನೆಮ್ಮದಿಯಿಂದ ಜೀವಿಸಿ-ಡಾ. ಸಿ.ಆರ್. ಚಂದ್ರಶೇಖರ ಅವರ ಕೃತಿ. ಜೀವನದಲ್ಲಿ ನೆಮ್ಮದಿಯಿಂದ ಇರಬೇಕಾದರೆ ದುಃಖವನ್ನು ಸಹಿಸಿಕೊಳ್ಳುವ ಮೂಲಕವೇ ಆಗಬೇಕು. ಇಲ್ಲವೆಂದರೆ, ದುಃಖ ನಮ್ಮ ಮನಸ್ಸನ್ನು ಆವರಿಸಿಕೊಳ್ಳುತ್ತದೆ. ಆದ್ದರಿಂದ, ದುಃಖವನ್ನು ಭರಿಸಿಕೊಳ್ಳುತ್ತಲೇ ನೆಮ್ಮದಿಯಾಗಿ ಇರುವ ಮೂಲಕ ಮಾನಸಿಕ ಅನುಕೂಲತೆ ಮಾಡಿಕೊಳ್ಳುವಂತೆ ಸ್ವತಃ ಮನೋವೈದ್ಯರಾದ ಲೇಖಕರು ಸಲಹೆ ನೀಡಿದ್ದೇ ಈ ಕೃತಿ.
ಡಾ. ಸಿ.ಆರ್. ಚಂದ್ರಶೇಖರ್ ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ರಾಷ್ಟ್ರೀಯ ಮನೋರೋಗ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉಪ ಆರೋಗ್ಯ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮನೋವಿಜ್ಞಾನ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯುಳ್ಳ ಹಿರಿಯ ವೈದ್ಯರು ರೋಗಿಗಳ ಶುಶ್ರೂಷೆ, ಬೋಧನೆ ಮತ್ತು ತರಬೇತಿ ನೀಡುತ್ತಿರುವುದರ ಜೊತೆಗೆ ಕಳೆದ 30 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. 150 ಕ್ಕೂ ಹೆಚ್ಚು ಮನೋವಿಜ್ಞಾನದ ಬಗ್ಗೆ ಕನ್ನಡದಲ್ಲಿ ರಚಿಸಿರುವ ಇವರ ಹಲವು ಪುಸ್ತಕಗಳು ತೆಲುಗು, ಉರ್ದು, ಗುಜರಾತಿ, ಹಿಂದಿ ಭಾಷೆಗಳಿಗೆ ಅನುವಾದಗೊಂಡಿವೆ. 1000 ಕ್ಕೂ ಹೆಚ್ಚು ಪ್ರೌಢ ಲೇಖನಗಳನ್ನು ಬರೆದಿದ್ದಾರೆ. ...
READ MORE