ಉದಯವಾಣಿ ಪತ್ರಿಕೆಯಲ್ಲಿ ಪ್ರತಿ ಭಾನುವಾರದ ಸಾಪ್ತಾಹಿಕದಲ್ಲಿ (ಆಗಸ್ಟ್ 2003ರವರೆಗೆ) ಲೇಖಕ ಓ.ಎಲ್. ನಾಗಭೂಷಣ ಸ್ವಾಮಿ ಅವರು ಬರೆದ ಅಂಕಣಗಳಲ್ಲಿಯ ಪ್ರಬಂಧಗಳನ್ನು ಇಲ್ಲಿ ಸಂಕಲಿಸಿದ್ದೇ ಈ ಕೃತಿ-ಏಕಾಂತ ಲೋಕಾಂತ. ಕವಿ ಎಚ್.ಎಸ್. ರಾಘವೇಂದ್ರ ರಾವ್ ಕೃತಿಗೆ ಬರೆದ ಮುನ್ನುಡಿಯಲ್ಲಿ ‘ಇಲ್ಲಿಯ ಅಂಕಣ ಬರೆಹಗಳು ಅಂಕಣತೆಯನ್ನೂ ಮೀರುತ್ತವೆ’ ಎಂದು ಪ್ರಶಂಸಿಸಿದ್ದಾರೆ.
ಕೃತಿಯಲ್ಲಿ ಬದಲಾವಣೆಯ ಅರಿವು, ಸೌಂದರ್ಯದ ಉದ್ಯಮ, ಸೌಂದರ್ಯದ ರಾಜಕೀಯ, ಧ್ಯಾನದಲ್ಲಿ ಕಂಡ ಜೇಡರ ಹುಳು: ಮೂರು ಕಥೆಗಳು, ಅವಳು ಅಂದು ಹಾಗೇಯೇ ಕಂಡಿದ್ದಳೇ?, ಸುಡುವ ಕಾಲ, ಯಾವ ಊರಾದರೇನು?, ಹೆಂಡದಂಗಡಿ ಮತ್ತು ಮಕ್ಕಳಾಟ, ಎಷ್ಟೊಂದು ಕಿಡಕಿ ಹೀಗೆ ಸುಮಾರು 34 ಅಂಕಣ ಬರೆಹಗಳು ಒಳಗೊಂಡಿವೆ.
ಓ ಎಲ್ ನಾಗಭೂಷಣ ಸ್ವಾಮಿ- ಹುಟ್ಟಿದ್ದು22 ಸೆಪ್ಟೆಂಬರ್ 1953, ಬೆಂಗಳೂರು ಸಮೀಪದ ಹೊಸಕೋಟೆಯಲ್ಲಿ. ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ ಇಂಗ್ಲಿಷ್ (1873) , ಎಂ.ಎ. ಕನ್ನಡ(1975)ಪದವಿ, ಎಂಡಿಟಿಡಿಬಿ ಕಾಲೇಜು ಮೈಸೂರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು. ಶಿಕಾರಿಪುರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆನೇಕಲ್. ಕನ್ನಡ ವಿಶ್ವವಿದ್ಯಾಲಯದಲ್ಲಿ ಭಾಷಾಂತರ ವಿಭಾಗದ ಪ್ರೊಫೆಸರ್ ಮತ್ತು ಮುಖ್ಯಸ್ಥರಾಗಿ ಸೇವೆ (1992-1998). ಜನವರಿ2005 ರಲ್ಲಿ ಉದ್ಯೋಗದಿಂದ ಸ್ವಯಂ ನಿವೃತ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ, ಕನ್ನಡ ವಿಶ್ವವಿದ್ಯಾನಿಲಯ ಕೆ. ಕೆ. ಬಿರ್ಲಾ ಫೌಂಡೇಷನ್, ಜೆ. ಕೃಷ್ಣಮೂರ್ತಿ ಪೌಂಡೇಷನ್ ಮುಂತಾದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಹಲವು ಮಹತ್ವದ ...
READ MORE