ಲಿಂಗಾಯತ ಧರ್ಮದಲ್ಲಿ ಮುಕ್ತಿಯನ್ನು ಕಾಣಲು ಏರಬೇಕಾದ ಮಜಲುಗಳನ್ನು ಷಟ್ಸ್ಥಲ ಸೂಚಿಸುತ್ತದೆ. ಅಂಗ ಷಟ್ಸ್ಥಲ ೪೪ ಮತ್ತು ಲಿಂಗ ಷಟ್ಸ್ಥಲ ೫೭ ಸ್ಥಲಗಳನ್ನು ಹೊಂದಿರುವುದರಿಂದ ಏಕೋತ್ತರ ಶತಸ್ಥಲ ಎನ್ನಲಾಗುತ್ತದೆ.
ಅಂಗ ಷಟ್ಸ್ಥಲದಲ್ಲಿ ಭಕ್ತ, ಮಾಹೇಶ್ವರ, ಪ್ರಸಾದಿ, ಪ್ರಾಣಲಿಂಗ, ಶರಣ ಹಾಗೂ ಐಕ್ಯ ಎಂಬ ಐದು ವಿಭಾಗಗಳಿವೆ. ಹಾಗೆಯೇ ಲಿಂಗ ಷಟ್ಸ್ಥಲದಲ್ಲಿ ಆಚಾರಲಿಂಗ, ಗುರುಲಿಂಗ, ಶಿವಲಿಂಗ, ಜಂಗಮಲಿಂಗ ಪ್ರಸಾದಲಿಂಗ ಹಾಗೂ ಮಹಾಲಿಂಗ ಎಂಬ ಆರು ವಿಭಾಗಗಳಿವೆ.
ಇದರ ಕೃತಿಕಾರ ಯಾರು ಹಾಗೂ ಈ ಬಗೆಗೆ ಇದ್ದ ವಿವಾದಗಳನ್ನು ಪರಿಹರಿಸಲು ಡಾ. ಎಂ.ಎಂ. ಕಲಬುರ್ಗಿ ಹಾಗೂ ಡಾ. ವೀರಣ್ಣ ರಾಜೂರ ಯತ್ನಿಸಿದ್ದಾರೆ.
ಕರ್ನಾಟಕದಲ್ಲಿ ಸಂಶೋಧನಾ ಕ್ಷೇತ್ರದ ಪ್ರಮುಖ ಹೆಸರು ಎಂ.ಎಂ. ಕಲಬುರ್ಗಿ. ಶಾಸನಶಾಸ್ತ್ರ, ಸಾಹಿತ್ಯ ಚರಿತ್ರೆ, ಛಂದಸ್ಸು, ಇತಿಹಾಸ, ವಾಸ್ತುಶಿಲ್ಪ, ಗ್ರಂಥಸಂಪಾದನೆ, ಹಸ್ತಪ್ರತಿಶಾಸ್ತ್ರ, ಜಾನಪದ, ಸ್ಥಳನಾಮಗಳ ಅಧ್ಯಯನ, ಸಾಹಿತ್ಯ ವಿಮರ್ಶೆ ಕ್ಷೇತ್ರಗಳಲ್ಲಿ ಹರಡಿಕೊಂಡಿವೆ. ಮಲ್ಲೇಶಪ್ಪ ಮಡಿವಾಳಪ್ಪ ಕಲಬುರ್ಗಿಯವರು ಬಿಜಾಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯರಗಲ್ಲ ಗ್ರಾಮದಲ್ಲಿ 1938ರ ನವೆಂಬರ್ 28ರಂದು ಜನಿಸಿದರು. ತಾಯಿ ಗುರಮ್ಮ; ತಂದೆ ಮಡಿವಾಳಪ್ಪ. ಕಲಬುರ್ಗಿಯವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿ.ಎ (1960) ಮತ್ತು ಎಂ.ಎ (1962) ಪದವಿ ಪಡೆದ ಅವರು ಸಲ್ಲಿಸಿದ ‘ಕವಿರಾಜಮಾರ್ಗ ಪರಿಸರದ ಕನ್ನಡ ಸಾಹಿತ್ಯ’ (1968) ಎಂಬ ಮಹಾಪ್ರಬಂಧಕ್ಕೆ ಪಿ.ಎಚ್.ಡಿ. ಪದವಿ ಸಂದಿತ್ತು. ಕರ್ನಾಟಕ ಕಾಲೇಜಿನಲ್ಲಿ ...
READ MORE