ಕವಿ ಜಿ.ಎಸ್. ಶಿವರುದ್ರಪ್ಪ ಅವರ ಕೃತಿ-ಎರಡು ಪ್ರವಾಸ ಕಥನಗಳು. ಅಮೆರಿಕದಲ್ಲಿ ಕನ್ನಡಿಗ, ಗಂಗೆಯ ಶಿಖರಗಳಲ್ಲಿ ಪ್ರವಾಸ ಕಥನಗಳು ಹೀಗೆ ವಿವಿಧ ಪ್ರವಾಸ ಕಥನಗಳ ದಟ್ಟ ಅನುಭವವನ್ನು ಕಟ್ಟಿಕೊಟ್ಟಿರುವ ಲೇಖಕರು, ಈ ಕೃತಿಯಲ್ಲಿ ಮಾಸ್ಕೋದಲ್ಲಿ 22 ದಿನ ಹಾಗೂ ಇಂಗ್ಲೆಂಡಿನಲ್ಲಿ ಚಾತುರ್ಮಾಸ ಎಂಬ ಶೀರ್ಷಿಕೆಯಡಿ ಎರಡು ದೇಶಗಳಲ್ಲಿಯ ತಮ್ಮ ಅನುಭವ ಕಥನವನ್ನು ಕನ್ನಡ ಓದುಗರಿಗೆ ನೀಡಿದ್ದಾರೆ. ಇವರ ಪ್ರವಾಸ ಕಥನ ಸಾಹಿತ್ಯಕ್ಕೆ ಸೋವಿಯತ್ ಲ್ಯಾಂಡ್ ನೆಹರೂ ಪ್ರಶಸ್ತಿ ಸೇರಿದಂತೆ ಪ್ರವಾಸ ಸಾಹಿತ್ಯದಲ್ಲಿ ಇವರ ಕೃತಿಗಳು ಅದ್ವಿತೀಯವಾಗಿ ನಿಲ್ಲುತ್ತವೆ.
ಸಮನ್ವಯ ಕವಿಗಳಲ್ಲಿ ಒಬ್ಬರು ಎಂದು ಗುರುತಿಸಲಾಗುವ ಡಾ.ಜಿ.ಎಸ್. ಶಿವರುದ್ರಪ್ಪ ಅವರು ವಿಮರ್ಶಕರಾಗಿಯೂ ಗಣನೀಯ ಸಾಧನೆ ಮಾಡಿದ್ದಾರೆ. ಗದ್ಯ-ಪದ್ಯಗಳೆರಡರಲ್ಲಿಯೂ ಮಾಗಿದ ಪ್ರತಿಭೆ ಅವರದು. ತಂದೆ ಗುಗ್ಗುರಿ ಶಾಂತವೀರಪ್ಪ ಮತ್ತು ತಾಯಿ ವೀರಮ್ಮ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ 1926ರ ಫೆಬ್ರುವರಿ 7ರಂದು ಜನಿಸಿದರು. ಶಾಲಾ ಉಪಾಧ್ಯಾಯರ ಮಗನಾದ ಜಿ.ಎಸ್.ಎಸ್ ಅವರು ಎಸ್.ಎಸ್.ಎಲ್.ಸಿ ಮುಗಿಯುತ್ತಿದ್ದಂತೆಯೇ ಬಡತನದ ಕಾರಣದಿಂದ ಸರಕಾರಿ ನೌಕರಿ ಹಿಡಿಯಬೇಕಾಯಿತು. ಗುಬ್ಬಿ ತಾಲ್ಲೂಕು ಕಚೇರಿಯಲ್ಲಿ ಗುಮಾಸ್ತರಾಗಿ ಸೇರಿದರು. ಆದರೆ ಓದಲೇಬೇಕೆಂಬ ಅದಮ್ಯ ಆಸೆಯಿಂದ ಕೆಲಸಕ್ಕೆ ವಿದಾಯ ಹೇಳಿ ಮೈಸೂರು ಮಹಾರಾಜ ಕಾಲೇಜಿನಲ್ಲಿ ಓದನ್ನು ಮುಂದುವರೆಸಿ ಬಿ.ಎ. ಪದವಿ (1949), ಸ್ವರ್ಣಪದಕದೊಂದಿಗೆ ...
READ MORE