ಬೆಂಗಳೂರು ಸೆಂಟ್ರಲ್ ಕಾಲೇಜಿನ ವಿದ್ಯಾರ್ಥಿಗಳು ಬರೆದ ಪ್ರಬಂಧಗಳನ್ನು ಜಿ.ಪಿ. ರಾಜರತ್ನಂ ಅವರು ಸಂಪಾದಿಸಿದ ಕೃತಿ-ಗಂಧದ ಹುಡಿ. ಮಕ್ಕಳ ಮಾತು, ತರಗತಿಯ ಕಿಟಕಿಯಿಂದಾಚೆ, ನನ್ನ ಪುಸ್ತಕ ಸಂಗ್ರಹಣ, ಕಾಂಪೌಂಡ್ ಗೋಡೆ, ಸ್ನೇಹದ ಸವಿ, ಏರೋಪ್ಲೇನ್ ತಲೆಯ ಮೇಲೆ ಹಾರಿ ಹೋದಾಗ, ಮದುವೆ ಮನೆಯ ಸಂಗೀತ ಹೀಗೆ ವಿದ್ಯಾರ್ಥಿಗಳೆ ಬರೆದ ಪ್ರಬಂಧಗಳಿವು. ವಿದ್ಯಾರ್ಥಿಗಳನ್ನು ಒಂದೆಡೆ ಸೇರಿಸಿ, ಅವರಲ್ಲಿರುವ ಅರೆಕೊರೆ ಬೆಳಕುಗಳನ್ನು ಒಟ್ಟುಗೂಡಿಸಿ ಪ್ರಸಾರ ಮಾಡುವುದು ಇದರ ಉದ್ದೇಶ ಎಂದು ಸಂಪಾದಕ ಜಿ.ಪಿ. ರಾಜರತ್ನಂ ಕೃತಿಯ ಪ್ರಸ್ತಾವನೆಯಲ್ಲಿ ಹೇಳಿದ್ದಾರೆ.
ಆಡುಮಾತಿನ ಪದಗಳ ಬಳಕೆಯ ‘ರತ್ನನ ಪದಗಳು’ ಮೂಲಕ ಜನಪ್ರಿಯರಾಗಿದ್ದ ಜಿ.ಪಿ. ರಾಜರತ್ನಂ ಅವರು ಕನ್ನಡ ಸಾಹಿತ್ಯದ ಪರಿಚಾರಿಕೆಗೂ ಹೆಸರಾಗಿದ್ದರು. ರಾಜರತ್ನಂ ಅವರು ಜನಿಸಿದ್ದು ಬೆಂಗಳೂರು ಜಿಲ್ಲೆಯ ರಾಮನಗರದಲ್ಲಿ 1908ರ ಡಿಸೆಂಬರ್ 8 ರಂದು. ತಂದೆ ಜೆ.ಪಿ. ಗೋಪಾಲಕೃಷ್ಣಯ್ಯಂಗಾರ್. ರಾಜರತ್ನಂ ಅವರು ಮೈಸೂರಿನಲ್ಲಿ ಪ್ರೌಢಶಾಲಾ ಶಿಕ್ಷಣ ಮುಗಿಸಿ, ಸೆಂಟ್ರಲ್ ಕಾಲೇಜಿನಲ್ಲಿ ಬಿ.ಎ. ಮತ್ತು ಮೈಸೂರು ಮಹಾರಾಜ ಕಾಲೇಜಿನಲ್ಲಿ ಎಂ.ಎ. ಪದವಿ ಗಳಿಸಿದರು. ಅನಂತರ ಮೈಸೂರು, ತುಮಕೂರು, ಶಿವಮೊಗ್ಗ, ಬೆಂಗಳೂರು ಕಾಲೇಜುಗಳಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಅವರು 1964ರಲ್ಲಿ ನಿವೃತ್ತರಾದ ಮೇಲೆ ಯುಜಿಸಿ ಉಪಾಧ್ಯಾಯರಾಗಿ ಕೆಲವು ಕಾಲ ಸೇವೆ ಸಲ್ಲಿಸಿದರು. ಕವಿ, ...
READ MORE