‘ಗಾಂಧಿಗಿರಿಯ ಫಸಲುಗಳು’ ಲೇಖಕ ಜಗದೀಶ ಕೊಪ್ಪ ಅವರ ಲೇಖನಗಳ ಸಂಕಲನ. ಗಾಂಧಿವಾದಿಗಳಾದ ರಾಮ ಮನೋಹರ ಲೋಹಿಯಾ, ಸಾನೆ ಗುರೂಜಿ, ಹರ್ಡೇಕರ್ ಮಂಜಪ್ಪ, ಗೋಪಾಲಗೌಡರು ಸೇರಿದಂತೆ ಇತರೆ ಗಾಂಧಿವಾದಿಗಳ ನಡೆ-ನುಡಿಯ ಚಿಂತನೆಗಳನ್ನು ಚರ್ಚಿಸಿದ್ದಾರೆ. ಗಾಂಧೀಜಿಯವರ ಜೀವನ, ವಿಚಾರ, ದೂರದೃಷ್ಟಿ, ಪರಿಣಾಮಗಳ ಮೇಲೆ ಬೆಳಕು ಚೆಲ್ಲುವ ಮತ್ತು ಗಾಂಧಿಯುಗದಲ್ಲಿ ಜಾರಿಯಾದ ಜನಪರ ಕಾನೂನುಗಳ ಕುರಿತ ವಿವರಣೆಗಳನ್ನು ಒಳಗೊಂಡಿದೆ. ಈ ಕೃತಿಗೆ ಬೆಂಗಳೂರು ಗಾಂಧಿ ಪ್ರತಿಷ್ಠಾನದ 2019ನೇ ಸಾಲಿನ ಜಯಶ್ರೀ ದತ್ತಿ ನಿಧಿ ಪ್ರಶಸ್ತಿ ಲಭಿಸಿದೆ.
ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೊಪ್ಪ ಗ್ರಾಮದಲ್ಲಿ 1956 ರಲ್ಲಿ ರೈತ ಕುಟುಂಬದಲ್ಲಿ ಜನನ. ಬೆಂಗಳೂರು ವಿ.ವಿ.ಪುರಂ ಕಾಲೇಜಿನಿಂದ ಬಿ.ಎ. ಪದವಿ, ಮೈಸೂರು ವಿಶ್ವವಿದ್ಯಾನಿಲಯದಿಂದ ಅರ್ಥಶಾಸ್ತ್ರದಲ್ಲಿ ಎಂ.ಎ. ಪದವಿ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾನಿಯದಿಂದ ‘ ಜಾಗತೀಕರಣ ಮತ್ತು ಗ್ರಾಮ ಭಾರತ’ ಪೌಢಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪಡೆದರು. 1981 ರಲ್ಲಿ ಪತ್ರಿಕೋದ್ಯಮ ಪ್ರವೇಶಿಸಿದ ಇವರು 2018 ರವರೆಗೆ ಹುಬ್ಬಳ್ಳಿ ನಗರದಲ್ಲಿ ಉದಯಟಿ.ವಿ.ಸಂಸ್ಥೆಯ ಉತ್ತರ ಕರ್ನಾಟಕ ಪ್ರಾದೇಶಿಕ ಕಚೇರಿಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ಇದೀಗ ಮೈಸೂರು ನಗರದಲ್ಲಿ ನಿವೃತ್ತ ಜೀವನ ನಡೆಸುತ್ತಿದ್ದಾರೆ. 1995 ರಲ್ಲಿ ಸುಮ್ಮಾನದ ಪದ್ಯಗಳು ಕೃತಿಯ ಮೂಲಕ ...
READ MORE