ಮಹಾತ್ಮಾ ಗಾಂಧಿಯವರನ್ನು ಹತ್ತಿರದಿಂದ ನೋಡಿ, ಅವರಿಂದ ಸಾಕಷ್ಟು ಕಲಿತ ಮಹಾರಾಷ್ಟ್ರದ ಖ್ಯಾತ ಲೇಖಕರಾಗಿದ್ದ ಶ್ರೀಪಾದ ಜೋಷಿಯವರು ಸೇವಾ ಗ್ರಾಮದ ಪರಿಸರದಲ್ಲಿ ಕಂಡುಬರುತಿದ್ದ ಅನೇಕಾನೇಕ ಪ್ರಸಂಗಳನ್ನು ಕೃತಿಯಲ್ಲಿ ವಿವರಿಸಿದ್ದಾರೆ.
ಗಾಂಧಿ ಇಲ್ಲಿ ಮಹಾತ್ಮ ಎಂಬ ಚೌಕಟ್ಟಿನಿಂದ ಹೊರಬಂದು ಬೇರೆಯದೇ ವ್ಯಕ್ತಿತ್ವವಾಗಿ ಕಾಣುತ್ತಾರೆ. ಜೋಷಿಯವರು ತಮಗೆ ಗಾಂಧಿಯವರ ಸಂಪರ್ಕ ಬಂದ ರೀತಿ, ಅವರೊಡನೆ ವರ್ತಿಸುವಾಗ ತಮ್ಮ ಮನಸ್ಥಿತಿ ಹೇಗಿತ್ತು ಈ ಎಲ್ಲಾ ವಿಷಯಗಳ ಕುರಿತ ಮಾಹಿತಿಯನ್ನು ಲೇಖಕರು ಈ ಕೃತಿಯಲ್ಲಿ ನೀಡಿದ್ದಾರೆ.
ಲೇಖಕ, ಅನುವಾದಕ ಪ್ರಧಾನ್ ಗುರುದತ್ ಅವರು ಹುಟ್ಟಿದ್ದು 30-05-1938ರಂದು ಚಿಕ್ಕಬಳ್ಳಾಪುರದಲ್ಲಿ. ಮೈಸೂರಿನಲ್ಲಿ ಉನ್ನತ ಶಿಕ್ಷಣ ಪಡೆದ ಅವರು ಕನ್ನಡದಲ್ಲಿ ಎಂ.ಎ.ಆನರ್ಸ್, ಅನುವಾದದಲ್ಲಿ ಎಂ.ಎ., ಜೊತೆಗೆ ಪ್ರೊ.ವೆಂಕಟರಾಮಪ್ಪನವರ ಮಾರ್ಗದರ್ಶನದಲ್ಲಿ ಡಾಕ್ಟರೇಟ್ ಗಳಿಸಿದ್ದಾರೆ. ಪಿಎಚ್.ಡಿ ವಿಷಯವಾಗಿ ಕೃಷ್ಣ ಕಥೆಯ ಉಗಮ ಮತ್ತು ವಿಕಾಸ. ತುಮಕೂರು ವಿಶ್ವವಿದ್ಯಾಲಯದಿಂದ ಡಿ.ಲಿಟ್. ಪದವಿ ಪಡೆದಿದ್ದಾರೆ. ಪಿ.ಎಚ್.ಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಿದ್ದಾರೆ. ಮೈಸೂರು ವಿಶ್ವವಿದ್ಯಾಲಯದಲ್ಲಿ ಡಾ. ಕುವೆಂಪು ಕನ್ನಡ ಅಧ್ಯಯನಪೀಠದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆಸಲ್ಲಿಸಿ 1998ರಲ್ಲಿ ನಿವೃತ್ತರಾಗಿದ್ದಾರೆ. ಬಹುಮುಖ ಪ್ರತಿಭೆ, ಅಪರೂಪದ ಪ್ರಾಧ್ಯಾಪಕರು, ಬಹುಭಾಷಾಪಂಡಿತರು ಆಗಿರುವ ಪ್ರಧಾನ್ ಗುರುದತ್ತರು 150ಕ್ಕೂ ಮಿಗಿಲಾದ ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಸುಮಾರು ...
READ MORE