ಗೋವಾದ ಗುಡಿಗಳು, ಅಲ್ಲಿನ ಜನರ ಅಧ್ಯಾತ್ಮಿಕ, ಸಾಂಸ್ಕೃತಿಕ ಮತ್ತು ಕಲೆಗಳ ಬೀಡಾಗಿವೆ. ಗುಡಿಗಳು ವಾಸ್ತು ಶಾಸ್ತ್ರಗಳ ಪ್ರಕಾರ ನಿರ್ಮಿಸಲಾಗಿದ್ದರೂ, ಪಾಶ್ಚಾತ್ಯ ಶಿಲ್ಪಕಲಾ ಪ್ರಭಾವ ಅವುಗಳ ಹೊರಮೈ ಕಟ್ಟಡ ವಿನ್ಯಾಸದಲ್ಲಿ ಇರುವುದನ್ನು ಗಮನಿಸಬಹುದು. ಈ ಕೃತಿಯಲ್ಲಿ ಲೇಖಕ ಆಗುಂಬೆ ನಟರಾಜ್ ಅವರು ತಮ್ಮ ಪ್ರವಾಸದಲ್ಲಿ ಗೋವಾದ ಪ್ರಸಿದ್ಧ ಗುಡಿಗಳ ದರ್ಶನ ಮಾಡಿ ಅವುಗಳ ಪರಿಚಯವನ್ನು ಸಂಕ್ಷಿಪ್ತವಾಗಿ ವಿವರಿಸಿದ್ದಾರೆ.
ಲೇಖಕ ನಟರಾಜ್, 1939 ನವೆಂಬರ್ 20 ರಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಹುಟ್ಟಿದರು. ತಂದೆ ಎ. ಎಸ್. ಭಟ್, ತಾಯಿ ಲಕ್ಷ್ಮಮ್ಮ. ಕಾಲೇಜು ದಿನಗಳಿಂದಲೂ ಸಾಹಿತ್ಯದ ಬಗ್ಗೆ ಒಲವಿದ್ದು, ನಿವೃತ್ತಿಯ ನಂತರ ಈಗ ಪೂರ್ಣ ಪ್ರಮಾಣದ ಬರಹಗಾರರು. ಸದಾ ಒಂದಿಲ್ಲೊಂದು ಕಡೆ ಪ್ರವಾಸ ಅಥವಾ ಬಿಡುವಿನ ವೇಳೆಯಲ್ಲಿ ಸಾಹಿತ್ಯ ರಚನೆಯಲ್ಲಿ ತೊಡಗುತ್ತಾರೆ. ಅವರ ಪ್ರವಾಸಾನುಭವದ ಲೇಖನಗಳು ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ‘ಬಾತುಕೋಳಿ’ ಮತ್ತು ‘ಆತಂಕ’ ಎಂಬ ಎರಡು ಕಾದಂಬರಿಗಳು. ‘ಚಕ್ಕಂದ’ ಎಂಬ ಹನಿಗವನ ಸಂಕಲನ, ‘ರಸನಿಮಿಷ’ ಎಂಬ ಹಾಸ್ಯಕಥೆಗಳ ಸಂಗ್ರಹ. ‘ರಸ ವೈಚಾರಿಕತೆ’ ಎಂಬ ವೈಚಾರಿಕ ...
READ MORE