ಹಿರಿಯ ಲೇಖಕಿ ಪಾರ್ವತಿ ಜಿ. ಐತಾಳ್ ಅವರು ಪರ್ಲ್ ಎಸ್ ಬಕ್ ಅವರ ಅನುವಾದಿತ ಕಾದಂಬರಿ. ನೊಬೆಲ್ ಪ್ರಶಸ್ತಿ ಪುರಸ್ಕೃತವಾದ ಚೀನಿ ಕಾದಂಬರಿ ಇದು. ನಂಬಿಕೆ ಇಟ್ಟು ಶ್ರಮಿಸಿದರೆಡ ಭೂಮಿ ಎಂದಿಗೂ ಶ್ರಮಿಕರ ಕೈ ಬಿಡದು ಎಂಬ ಭಾವವಿದೆ. ಅತಿಯಾದ ಭೌತಿಕ ಸಂಪತ್ತಿನ ಆಸೆಯು ಮನುಷ್ಯನನ್ನು ಹೇಗೆ ಹಾಳು ಮಾಡುತ್ತದೆ ಮತ್ತು ನೈತಿಕವಾಗಿ ಕೆಳಮಟ್ಟಕ್ಕೆ ದೂಡುತ್ತದೆ ಎಂಬುದು ಈ ಕಾದಂಬರಿಯ ಸ್ಪಷ್ಟಚಿತ್ರಣವನ್ನು ಕಟ್ಟಿಕೊಡುತ್ತದೆ.
ಪಾರ್ವತಿ ಜಿ.ಐತಾಳ ಅವರು ಕಾಸರಗೋಡು ಜಿಲ್ಲೆಯ ಧರ್ಮತ್ತಡ್ಕ ಎಂಬ ಹಳ್ಳಿಯಲ್ಲಿ ಜುಲೈ 23, 1957ರಂದು ಜನಿಸಿದರು. 1981ರಲ್ಲಿ ಮೈಸೂರಿನ ಮಾನಸಗಂಗೋತ್ರಿಯಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಎಂ.ಎ. ಪದವಿ ಪಡೆದರು. 2012ರಲ್ಲಿ ಕಣ್ಣೂರು ವಿಶ್ವವಿದ್ಯಾನಿಲಯದಿಂದ ಪಿಎಚ್.ಡಿ ಪದವಿಯನ್ನು ಪಡೆದರು. ಮಂಗಳೂರು ಜಿಲ್ಲೆಯ ಮುಲ್ಕಿಯ ವಿಜಯಾ ಕಾಲೇಜಿನಲ್ಲಿ ಏಳು ವರ್ಷಗಳವರೆಗೆ ಪ್ರಾಧ್ಯಾಪಕಿಯಾಗಿ ದುಡಿದ ಪಾರ್ವತಿಯವರು, ಶ್ರೀ ಗಂಗಾಧರ ಐತಾಳರೊಡನೆ ಮದುವೆಯಾದ ಬಳಿಕ 1988ರಲ್ಲಿ ಕುಂದಾಪುರದ ಭಂಡಾರ್ಕರ್ಸ್ ಕಾಲೇಜಿಗೆ ಬಂದು ಇಂಗ್ಲಿಷ್ ವಿಭಾಗದ ಮುಖ್ಯಸ್ಥೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪಾರ್ವತಿ ಅವರು ಅನೇಕ ಸಣ್ಣ ಕಥೆ, ಕವನ, ನಾಟಕ ಬರೆದಿರುವರಾದರೂ, ಅನುವಾದ ಕ್ಷೇತ್ರದಲ್ಲಿ ಹೆಚ್ಚಿನ ...
READ MORE