ಅವಿಭಜಿತ ಧಾರವಾಡ ಜಿಲ್ಲೆಯ ಶಿರಹಟ್ಟಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಂಚರಿಸಿ ಲೇಖಕ ಸಂಗಮೇಶ ತಮ್ಮನಗೌಡ್ರ ಅವರು ಅಲ್ಲಿಯ ಭಾಷೆ ವೈವಿಧ್ಯತೆಯನ್ನು ಸಮೀಕ್ಷೆ ಮಾಡಿ ಬರೆದ ಕೃತಿ -ಗ್ರಾಮ ನಾಮ ಸಂಸ್ಕೃತಿ. ಪ್ರತಿ ಊರು ತನ್ನದೇ ಆದ ಐತಿಹಾಸಿಕ ಸಂಗತಿಗಳಿಂದ ಪ್ರಾಮುಖ್ಯತೆ ಪಡೆದಿದ್ದು, ಭಾಷೆಯೂ ಸಹ ತನ್ನ ವೈವಿಧ್ಯತೆಯನ್ನು ಕಾಯ್ದುಕೊಂಡೇ ಬಂದಿರುತ್ತದೆ. ಶತಮಾನ ಕಂಡ ಪ್ರಾಥಮಿಕ ಶಾಲೆಗಳ ಅಧ್ಯಯನಕ್ಕಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶದನ್ವಯ ಲೇಖಕರು ಕೈಗೊಂಡ ಸಮೀಕ್ಷ ಮಧ್ಯೆ ಗ್ರಾಮ ನಾಮ ಸಂಸ್ಕೃತಿಯ ಮಾಹಿತಿಯೂ ಸಂಗ್ರಹಿಸುತ್ತಾ ಬಂದಿದ್ದೇ ಈ ಕೃತಿ ರೂಪುಗೊಂಡಿದೆ. ಲೇಖಕರು ಆಯ್ದುಕೊಂಡ ಗ್ರಾಮಗಳ ಇತಿಹಾಸವನ್ನು ಸಹ ತಿಳಿಯಲು ಈ ಕೃತಿ ಆಕರ ಗ್ರಂಥವಾಗಿದೆ.
ಸಂಗಮೇಶ ತಮ್ಮನಗೌಡ್ರ (ಎಸ್.ವಿ. ತಮ್ಮನಗೌಡ್ರ) ಮೂಲತಃ ಗದಗ ಜಿಲ್ಲೆಯ ಗುಜಮಾಗಡಿ ಗ್ರಾಮದವರು. (ಜನನ: 15-01-1970) ಸದ್ಯ, ರೋಣ ತಾಲೂಕಿನ ಬೂದಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರ ವಿ.ವಿ.ಯಿಂದ ಎಂ.ಎ, ಮಧುರೈ ಕಾಮರಾಜ ವಿವಿಯಿಂದ ಎಂ.ಫಿಲ್ ಹಾಗೂ ಮುಂಬೈ ವಿ.ವಿ.ಯಿಂದ ಪಿಎಚ್ ಡಿ (ವಿಷಯ: ಕನ್ನಡದಲ್ಲಿ ಏಕಾಂಕಗಳು: ಒಂದು ಅಧ್ಯಯನ-1975-95) ಪದವಿ ಪಡೆದರು. ದ.ರಾ. ಬೇಂದ್ರೆ ವೇದಿಕೆ ಸ್ಥಾಪಿಸಿ (2000) ನಿರಂತರವಾಗಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಕೃತಿಗಳು: ಹಂಸ, ಸ್ಫೂರ್ತಿ-ಕವನ ಸಂಕಲನಗಳು, ಮತ್ತೆ ಹುಟ್ಟಿತು ಕವನ-ಭಾವಗೀತೆಗಳ ಸಂಕಲನ, ಪಶ್ಚಾತ್ತಾಪ, ಕರುಳಿನ ಬೆಲೆ, ಖಳನಾಯಕನ ...
READ MORE